ಬೆಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿಯ ಮತ್ತೊಬ್ಬ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2007ರಲ್ಲಿ ಶಬನಂ ಡೆವಲಪರ್ಸ್ ಸಂಸ್ಥೆ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಗ್ಯಾಂಗ್ ದಾಳಿ ನಡೆಸಿ ಇಬ್ಬರನ್ನು ಶೂಟೌಟ್ ಮಾಡಿ ಕೊಂದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಇಕ್ಲಾಕ್ ಖುರೇಷಿ(45) ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿರಿ ಕರೊನಾ ಪಾಸಿಟಿವ್ ಬರುತ್ತಿದ್ದಂತೆ ಮನೆ ತೊರೆದ ಮಹಿಳೆ ನಾಲೆಗೆ ಹಾರಿ ಪ್ರಾಣಬಿಟ್ಟಳು!
ಉತ್ತರ ಪ್ರದೇಶದ ಮುಜಾಫರ್ ನಗರ ಮೂಲದ ಇಕ್ಲಾಕ್ ಖುರೇಷಿಯನ್ನು ಶಬನಂ ಡೆವಲಪರ್ಸ್ ಶೂಟೌಟ್ ಪ್ರಕರಣದಲ್ಲಿ ಈ ಹಿಂದೆಯೇ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಜಾಮೀನು ಪಡೆದು ಹೊರ ಬಂದ ಆರೋಪಿ, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಶಬನಂ ಡೆವಲಪರ್ಸ್ ಸಂಸ್ಥೆಯ ಇಬ್ಬರ ಶೂಟೌಟ್ಗೆ ತನ್ನ ಸಹಚರರ ಜೊತೆಗೂಡಿ ಇಕ್ಲಾಕ್ ಖುರೇಷಿ ಪಿಸ್ತೂಲ್ ಸಪ್ಲೈ ಮಾಡಿದ್ದ.
ದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ