More

    Video: ಯಾವುದೇ ಕಾರಣಕ್ಕೂ ರಾಜಿ ಆಗುವುದಿಲ್ಲ … ವಿಜಯಲಕ್ಷ್ಮೀ-ರವಿಪ್ರಕಾಶ್​ ಪ್ರಕರಣದಲ್ಲಿ ಹೊಸ ಟ್ವಿಸ್ಟ್​

    ಕಳೆದ ವರ್ಷ ಸಾಕಷ್ಟು ಸುದ್ದಿಯಾಗಿದ್ದ ‘ನಾಗಮಂಡಲ’ ಖ್ಯಾತಿಯ ವಿಜಯಲಕ್ಷ್ಮೀ ಮತ್ತು ರವಿಪ್ರಕಾಶ್​ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಮತ್ತು ರವಿಪ್ರಕಾಶ್​ ನಡುವೆ ಕಲಹವಾಗಿ ಸಾಕಷ್ಟು ಸುದ್ದಿಯಾಗಿತ್ತು. ಆ ನಂತರ ಪ್ರಕರಣ ತಣ್ಣಗಾಗಿತ್ತು. ಇನ್ನೇನು ಆ ಪ್ರಕರಣವನ್ನು ಎಲ್ಲರೂ ಮರೆಯುತ್ತಿರಬೇಕಾದರೆ, ರವಿಪ್ರಕಾಶ್​ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ.

    ಇದನ್ನೂ ಓದಿ: ತಾವೇ ಎತ್ತುಗಳಾಗಿ ಯುವತಿಯರ ಉಳುಮೆ; ಸೋನು ಸೂದ್​ ಕಡೆಯಿಂದ ಬಂತು ವಿಶೇಷ ಉಡುಗೊರೆ!

    ಇಷ್ಟಕ್ಕೂ ಆಗಿದ್ದೇನೆಂದರೆ, ಕಳೆದ ವರ್ಷ ವಿಜಯಲಕ್ಷ್ಮೀ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದ್ದರು. ಹಣಕಾಸಿನ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದ ಅವರು, ಆಸ್ಪತ್ರೆ ಬಿಲ್​ ಕಟ್ಟಲಾಗದೆ, ಸಹಾಯ ಮಾಡುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿಕೊಂಡಿದ್ದರು. ವಿಜಯಲಕ್ಷ್ಮೀ ಅವರ ಮನವಿಯ ಮೇರೆಗೆ ರವಿಪ್ರಕಾಶ್​ ಹಣ ಸಹಾಯ ಮಾಡಿದ್ದರು.

    ಆ ನಂತರ ಎಲ್ಲವೂ ಚೆನ್ನಾಗಿಯೇ ಇತ್ತು. ಅದೊಂದು ದಿನ ಇದ್ದಕ್ಕಿದ್ದಂತೆಯೇ, ರವಿಪ್ರಕಾಶ್​ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ರವಿಪ್ರಕಾಶ್ ಬಂಧನವಾಗಬೇಕು ಎಂದು ಒತ್ತಾಯಿಸಿ, ಆಸ್ಪತ್ರೆಯಲ್ಲಿಯೇ ಪ್ರತಿಭಟಿಸಿದ್ದರು. ರವಿಪ್ರಕಾಶ್​ ಈ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದಿದ್ದರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದಕ್ಕೆ ಹೋಗಿ, ಸಮಸ್ಯೆ ಎದುರಿಸುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದರು.

    ಆ ನಂತರ ಈ ಪ್ರಕರಣ ಹೆಚ್ಚು ಸುದ್ದಿಯಾಗಿರಲಿಲ್ಲ. ಈಗ ಆ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ರವಿಪ್ರಕಾಶ್​ ಇಂದು ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: PHOTO/VIDEO: ನಟ ನಿತಿನ್​, ಶಾಲಿನಿ ಮೆಹಂದಿ ಮತ್ತು ಸಂಗೀತ್​ನ ಝಲಕ್​ ಇಲ್ಲಿದೆ..

    ಈ ವಿಡಿಯೋದಲ್ಲಿ ಮಾತನಾಡಿರುವ ಅವರು, ‘ಇತ್ತೀಚೆಗೆ ವಿಜಯಲಕ್ಷ್ಮೀ ಅವರ ಅಕ್ಕ ಉಷಾದೇವಿ ಬಂದು, ತಪ್ಪಾಗಿದೆ ಕ್ಷಮಿಸಿ ಎಂದು ಹೇಳಿದ್ದಾರೆ. ಆದರೆ, ಈ ಪ್ರಕರಣದಿಂದ ಸಾಕಷ್ಟು ನೊಂದಿದ್ದೇವೆ. ಕಷ್ಟದಲ್ಲಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಸಹಾಯ ಮಾಡುವುದಕ್ಕೆ ಹೋಗಿ, ನಾವೇ ಸಮಸ್ಯೆ ಮೈಮೇಲೆ ಎಳೆದುಕೊಳ್ಳುವಂತಾಯಿತು. ಹಾಗಾಗಿ ರಾಜಿ ಪ್ರಶ್ನೆಯೇ ಇಲ್ಲ, ಈಗಾಗಲೇ ಈ ವಿಷಯದಲ್ಲಿ ನ್ಯಾಯಯುತವಾದ ಹೋರಾಟ ಮಾಡುವುದಕ್ಕೆ ನಿರ್ಧರಿಸಿದ್ದು, ಅದನ್ನು ಮುಂದುವರೆಸುತ್ತೇವೆ’ ಎಂದು ಹೇಳಿದ್ದಾರೆ.

    ಯಾವುದೇ ಕಾರಣಕ್ಕೂ ರಾಜಿ ಆಗುವುದಿಲ್ಲ …ವಿಜಯಲಕ್ಷ್ಮೀ-ರವಿಪ್ರಕಾಶ್​ ಪ್ರಕರಣದಲ್ಲಿ ಹೊಸ ಟ್ವಿಸ್ಟ್​

    ಕಳೆದ ವರ್ಷ ಸಾಕಷ್ಟು ಸುದ್ದಿಯಾಗಿದ್ದ ವಿಜಯಲಕ್ಷ್ಮೀ ಮತ್ತು ರವಿಪ್ರಕಾಶ್​ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಜಯಲಕ್ಷ್ಮೀ ಅವರ ಮನವಿಯ ಮೇರೆಗೆ ರವಿಪ್ರಕಾಶ್​ ಹಣ ಸಹಾಯ ಮಾಡಿದ್ದರು. ಆದರೆ, ನಂತರದ ದಿನಗಳಲ್ಲಿ ರವಿಪ್ರಕಾಶ್​ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ರವಿಪ್ರಕಾಶ್ ಬಂಧನವಾಗಬೇಕು ಎಂದು ಒತ್ತಾಯಿಸಿ, ಆಸ್ಪತ್ರೆಯಲ್ಲಿಯೇ ಪ್ರತಿಭಟಿಸಿದ್ದರು. ಆ ನಂತರ ಈ ಪ್ರಕರಣ ಹೆಚ್ಚು ಸುದ್ದಿಯಾಗಿರಲಿಲ್ಲ. ಈಗ ಆ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ರವಿಪ್ರಕಾಶ್​ ಇಂದು ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಷ್ಟಕ್ಕೂ ರವಿಪ್ರಕಾಶ್​ ಏನೆಲ್ಲಾ ಹೇಳಿದ್ದಾರೆ ಎಂದು ನೀವೆ ನೋಡಿ …

    Posted by Vijayavani on Sunday, July 26, 2020

    20 ದಿನಗಳ ಪಯಣವಷ್ಟೇ ಬಾಕಿ ಇದೆ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts