ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನನಲ್ಲಿ ಅಬ್ಬರಿಸಲು ಸಿದ್ಧವಾಗಿದೆ. ಸಿಎಸ್ಕೆ ವಿರುದ್ಧ ಸೋಲಿನ ಬಳಿಕ ಇದೀಗ ಆರ್ಸಿಬಿ ತಂಡ ತವರಿನಲ್ಲಿ ಗೆಲುವಿನ ಅಭಿಯಾನ ಆರಂಭಿಸಲು ಸಜ್ಜಾಗಿದೆ. ಪಂಜಾಬ್ ತಂಡ ಮೊದಲ ಗೆಲುವಿನ ಲಯವನ್ನು ಮುಂದುವರೆಸಲು ಸಜ್ಜಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ.
ಇದನ್ನೂ ಓದಿ: ಲೋಕಸಮರ: ಕಾಂಗ್ರೆಸ್ನಿಂದ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ! 5 ಅಭ್ಯರ್ಥಿಗಳ ಹೆಸರು ಪ್ರಕಟ
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಪಂಜಾಬ್ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಅಭಿಮಾನಿಗಳಿಂದ ಭರ್ತಿಯಾಗಿದೆ. ಎಲ್ಲೆಡೆ ಆರ್ಸಿಬಿ, ಕೊಹ್ಲಿ ಘೋಷಣೆಗಳು ಮೊಳಗುತ್ತಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡವು ಇದುವರೆಗೆ 84 ಪಂದ್ಯಗಳನ್ನಾಡಿದೆ. 39 ಮ್ಯಾಚ್ಗಳಲ್ಲಿ ಆರ್ಸಿಬಿ ಗೆದ್ದಿದೆ. ಆರ್ಸಿಬಿ ತಂಡದ ತವರು ಮೈದಾನದಲ್ಲಿ ಎದುರಾಳಿ ತಂಡ ಕೂಡ ಶೇ.50 ರಷ್ಟು ಗೆಲುವಿನ ಸರಾಸರಿ ಹೊಂದಿದೆ.
ಆರ್ಸಿಬಿ ಟೀಂ 11: ಫಾಫ್ ಡುಪ್ಲಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಕರಣ್ ಶರ್ಮಾ, ಅಲ್ಜಾರಿ ಜೊಸೆಫಿ, ಮಯಾಂಕ್ ಡಗಾರ್, ಮೊಹಮ್ಮದ್ ಸಿರಾಜ್
ಪಂಜಾಬ್ ಪ್ಲೇಯಿಂಗ್ 11 :
ಶಿಖರ್ ಧವನ್(ನಾಯಕ), ಜಾನಿ ಬೈರ್ಸ್ಟೋ, ಪ್ರಭಸಿಮ್ರನ್ ಸಿಂಗ್, ಸ್ಯಾಮ್ ಕುರನ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್ಸ್ಟೋನ್, ಶಶಾಂಕ್ ಸಿಂಗ್, ಹಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಾಗಿಸೋ ರಬಾಡ, ರಾಹುಲ್ ಚಹಾರ್.
ವಯನಾಡ್: ರಾಹುಲ್ ಗಾಂಧಿ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ