ಗುವಾಹಟಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿ, ಸದ್ಯ ಸುಪ್ರೀಂಕೋರ್ಟ್ ತೀರ್ಪಿನಿಂದ ನಿರಾಳರಾಗಿರುವ ರೆಬೆಲ್ ಶಾಸಕರು ಈಗ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾಲ ಕಳೆಯುತ್ತಿದ್ದಾರೆ.
ಸದ್ಯ ನಿರಾಳರಾಗಿರುವ ಶಾಸಕರು ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿಲ್ಲ. ಬದಲಾಗಿ ಚೆಸ್ ಸೇರಿದಂತೆ ಹಲವು ಆಟಗಳನ್ನು ಆಡಿ ನಿರಾರಳರಾಗುತ್ತಿದ್ದಾರೆ. ಕೆಲ ಸಭೆಗಳಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ, ಯಾವುದೇ ಗಂಭೀರ ಚರ್ಚೆಯಲ್ಲಿ ತೊಡಗಿಸಿಕೊಂಡಿಲ್ಲ. ಚೆಸ್, ಲೂಡೋ ಸೇರಿದಂತೆ ಒಳಾಂಗಣ ಆಟಗಳನ್ನು ಆಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಮಧ್ಯೆ ಯಾವೊಬ್ಬ ಶಾಸಕರೂ ಹೋಟೆಲ್ನಿಂದ ಹೊರಹೋಗದಂತೆ ರೆಬೆಲ್ ನಾಯಕ ಏಕನಾಥ್ ಶಿಂಧೆ ಅವರ ಆದೇಶವನ್ನು ಬಂಡಾಯ ಶಾಸಕರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.
ಶಿವಸೇನೆಯ 38 ಶಾಸಕರು ಹಾಗೂ 10 ಪಕ್ಷೇತರರು ಗುವಾಹಟಿಯ ಹೋಟೆಲ್ನಲ್ಲಿ ಬೀಡುಬಿಟ್ಟಿದ್ದಾರೆ. ಜೂನ್ 21 ರಿಂದ ಅಲ್ಲೇ ಉಳಿದುಕೊಂಡಿದ್ದಾರೆ. (ಏಜೆನ್ಸೀಸ್)
ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್: ಮುಂದುವರಿದ ರಕ್ಷಣಾ ಕಾರ್ಯಾಚರಣೆ