ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದ ತನಿಖೆಯ ಭಾಗವಾಗಿ ಬಿಜೆಪಿಯ ಲೋಕಸಭೆ ಸದಸ್ಯ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ಈ ವಿಷಯ ತಿಳಿಸಿದ್ದಾರೆ.
ಡಿಸೆಂಬರ್ 13 ರ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಯುತ್ತಿದೆ, ವರದಿ ಸಲ್ಲಿಸಿದ ನಂತರ ಕಾನೂನಿನ ಪ್ರಕಾರ ಪ್ರಕರಣದ ತನಿಖೆ ನಡೆಯುತ್ತದೆ ಎಂದು ಹೇಳಿದರು.
ಡಿಸೆಂಬರ್ 13 ರಂದು ಪ್ರೇಕ್ಷಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ಗೆ ಜಿಗಿದು ಬಂದಿದ್ದ ಇಬ್ಬರು ಹೊಗೆಯನ್ನು ಸಿಡಿಸಿದ್ದರು. ಈ ಇಬ್ಬರೂ ಪ್ರತಾಪ್ ಸಿಂಹ ಅವರ ಕಚೇರಿ ನೀಡಿದ ಪಾಸ್ಗಳ ಆಧಾರದ ಮೇಲೆ ಸಂಸತ್ತಿಗೆ ಪ್ರವೇಶಿಸಿದ್ದರು. ಬಿಜೆಪಿಯ ಪ್ರತಾಪ್ ಸಿಂಹ ಅವರು ಮೈಸೂರಿನಿಂದ ಎರಡು ಬಾರಿ ಲೋಕಸಭೆ ಸದಸ್ಯರಾಗಿದ್ದಾರೆ.
ಅತ್ಯಾಚಾರ ಮಾಡಿ ಚಿತ್ರೀಕರಣ: ಮಾಜಿ ಶಾಸಕ ಸೇರಿ 9 ಮಂದಿ ವಿರುದ್ಧ ಮಹಿಳೆ ದೂರು
ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ: 39.50 ರೂಪಾಯಿ ಕಡಿತ ಆಗಿದ್ದೇಕೆ?
ಸಂಸದರ ಅಮಾತನು ವಿರೋಧಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ: ಪ್ರತಿಪಕ್ಷಗಳ ನಾಯಕರು ಹೇಳಿದ್ದೇನು?