ನಿಯಮಿತ ಆರೋಗ್ಯ ತಪಾಸಣೆ ಅವಶ್ಯ

blank

ಗೋಕಾಕ: ಒತ್ತಡದ ಬದುಕಿನಿಂದ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪರಿಹಾರ ಕಂಡುಕೊಳ್ಳಲು ಆರೋಗ್ಯ ಶಿಬಿರ ಸಹಕಾರಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಪ್ಪ ಗಡೇದ ಹೇಳಿದರು.

ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಜಂಗಮ ಕ್ಷೇಮಾಭಿವದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರಿಂದ ಮುಂಬರುವ ರೋಗಗಳನ್ನು ಗುರುತಿಸಬಹುದು. ಆರೋಗ್ಯಕರ ಸಮಾಜ ನಿರ್ಮಿಸಲು ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಅತಿಯಾದ ಮೊಬೈಲ್ ಬಳಕೆಯು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪ್ರತಿಯೊಬ್ಬರೂ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದುಕೊಳ್ಳಬೇಕು. ದೈಹಿಕ ಚಟುವಟಿಕೆಗಳು, ವ್ಯಾಯಾಮ ಮಾಡಿದರೆ ಆರೋಗ್ಯವಂತರಾಗಬಹುದು ಎಂದು ವಿವರಿಸಿದರು.

ಇಲ್ಲಿನ ಮುಪ್ಪಯ್ಯ ಮಠದ ರಾಚೋಟೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ, ಜಿಪಂ ಮಾಜಿ ಸದಸ್ಯರಾದ ಟಿ.ಆರ್. ಕಾಗಲ, ಮಡೆಪ್ಪ ತೋಳಿನವರ, ಗ್ರಾಪಂ ಸದಸ್ಯ ಸುರೇಶ ಸನದಿ, ಮಾಜಿ ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್, ಡಾ.ಸಂಜಯ ಹೊಸಮಠ, ಪ್ರಕಾಶ ಕಂಬಿ ಇತರರಿದ್ದರು.

Share This Article

ಮಗು ಜನಿಸಿದ ಎಷ್ಟು ತಿಂಗಳ ಬಳಿಕ ಉಪ್ಪಿನ ಆಹಾರ ನೀಡಬೇಕು?; ತಜ್ಞರು ಹೇಳೊದೇನು? | Salty Food

Salty Food : ಹುಟ್ಟಿದ ಮಗುವನ್ನು ದೊಡ್ಡದಾಗಿ ಬೆಳೆಯುವವರಿಗೂ ನೋಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಬಟ್ಟೆ…

ಸನ್‌ಸ್ಕ್ರೀನ್, ಸೀರಮ್‌ಗಳನ್ನು ಬಳಸುತ್ತೀರಾ? ಹಾಗಿದ್ರೆ ಕ್ಯಾನ್ಸರ್​​ ಬರಬಹುದು ಎಚ್ಚರ! Glow Skin

Glow Skin | ನಮ್ಮ ಸ್ಕಿನ್​ ಗ್ಲೋ ಆಗಿ ಕಾಣಬೇಕೆಂದು ಮಹಿಳೆಯರು ಮಾಡುವ ಪ್ರಯತ್ನ ಒಂದೆರಡಲ್ಲ.…

ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಕಾಲಿನಿಂದ ತುಳಿಯಬೇಡಿ!  ನೀವು ಖಂಡಿತವಾಗಿಯೂ ಆರ್ಥಿಕ ತೊಂದರೆಗೆ ಸಿಲುಕುವಿರಿ.. Vasthu Tips

Vasthu Tips: ಹಿರಿಯರು ಹೇಳಿದ್ದನ್ನು  ಅನೇಕ ಜನರು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ನಾವು ಕೆಲವು ವಸ್ತುಗಳನ್ನು ದೇವರು…