ಅಧಿಕಾರ ಹೋದರೂ ಜಾತಿ ಗಣತಿ ಬಿಡುಗಡೆ ಮಾಡಿ: ಸಿಎಂಗೆ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಒತ್ತಾಯ

blank

ಬೆಂಗಳೂರು: ಅಧಿಕಾರ ಹೋದರೂ ಪರವಾಗಿಲ್ಲ “ಜಾತಿ ಗಣತಿ’ ವರದಿ ಬಿಡುಗಡೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ತಿಂಥಣಿಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಒತ್ತಾಯಿಸಿದರು.

ವರದಿ ಬಿಡುಗಡೆಗೆ ಸರ್ಕಾರ ಮೀನಮೇಷ ಎಣಿಸುತ್ತಿರುವುದು ನೋವಿನ ಸಂಗತಿ. ಇಷ್ಟು ದಿನವಾದರೂ ವರದಿ ಬಿಡುಗಡೆ ಮಾಡದೇ ಇರುವುದಕ್ಕೆ ಯಾರೋ ಅವರ ಕೈಕಟ್ಟಿದ್ದಾರೆಂದು ಅನಿಸುತ್ತಿದೆ. ಸಮೀಕ್ಷೆ ಬಿಡುಗಡೆ ಮಾಡಲು ಏಕೆ ವಿಳಂಬ ಮಾಡುತ್ತಿದ್ದೀರಿ? ಇದು ನನಗೆ ಬೇಸರ ತಂದಿದೆ ಎಂದರು. ಜನರಿಗೆ ನ್ಯಾಯ ಸಿಗುವಂತೆ ಮಾಡಲು ತಡಮಾಡದೆ ವರದಿ ಬಿಡುಗಡೆ ಮಾಡಬೇಕು ಎಂದರು.

ಕನಕದಾಸರು, ಬುದ್ಧ, ಬಸವಣ್ಣನವರ ಆಶಯಕ್ಕೆ ತಕ್ಕಂತೆ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ ಎಂದರು. ಕುರುಬ ಸಮುದಾಯದಲ್ಲಿರುವ 18 ಶ್ರೀಮಂತ ಕಲಾ ಪ್ರಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಕುರುಬ ಕಲಾ ಅಕಾಡೆಮಿ ಸ್ಥಾಪಿಸಬೇಕು ಎಂದು ಶ್ರೀಗಳು ಹೇಳಿದರು. ಕನಕದಾಸರ ಹೆಸರು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಧಾರವಾಡ ಸೇರಿ ಯಾವುದಾದರೂ ವಿವಿಗೆ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದರು.

ಪುಸ್ತಕ ಮಾರಾಟಕ್ಕೆ ಶೇ.50 ರಿಯಾಯ್ತಿ:ಸಿಎಂ ಸಿದ್ದರಾಮಯ್ಯ ಘೋಷಣೆ

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…