ಬೆಂಗಳೂರು: ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ
ಸಿಎಂ ಬಿಎಸ್ವೈ ವಿರುದ್ಧ ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿಗೆ ಸಂಬಂಧಿಸಿದ 20 ಎಕರೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪವಿದೆ.
ಇದನ್ನೂ ಓದಿರಿ: ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ: ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ
ಈ ಸಂಬಂಧ 2012ರಲ್ಲಿ ಲೋಕಾಯುಕ್ತವು ಚಾರ್ಜ್ಶೀಟ್ ಸಲ್ಲಿಸಿತ್ತು. ಚಾರ್ಜ್ಶೀಟ್ ಪರಿಗಣಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು.
ಇದರ ಬೆನ್ನಲ್ಲೇ ಸಿಎಂ ಬಿಎಸ್ವೈ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತನಿಖೆಗೆ ತಡೆ ನೀಡುವಂತ ಅರ್ಜಿಯಲ್ಲಿ ಕೋರಿದ್ದರು. ಅದರಂತೆ ಇಂದು ಆದೇಶ ಹೊರಡಿಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಬಾರಿಯ ಬಿಗ್ಬಾಸ್ ವಿನ್ನರ್ ಭವಿಷ್ಯ ನುಡಿದ ನೆಟ್ಟಿಗರು: ಲ್ಯಾಗ್ ಮಂಜು, ರಾಜೀವ್ ಅಲ್ಲ, ಮತ್ಯಾರು?
ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ ಆರೋಪ: ಐಪಿಎಸ್ ಅಧಿಕಾರಿಯ ವರ್ಗಾವಣೆ