ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಜೈನ ಧರ್ಮ ಸಾರ

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಜೈನಧರ್ಮ ಅತ್ಯಂತ ಪ್ರಾಚೀನ ಮತ್ತು ಶ್ರೇಷ್ಠ ಧರ್ಮವಾಗಿದ್ದು ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬುದು ಜೈನಧರ್ಮದ ಸಾರವಾಗಿದೆ ಎಂದು ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಹೇಳಿದರು. ನಾರಾವಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು. ಕಾರ್ಕಳ ಜೈನಮಠದ ಲಲಿತಕೀರ್ತಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಸಮವಸರಣದ ಪ್ರತೀಕವಾದ ಬಸದಿಗಳು ನಮ್ಮನ್ನು ನಾವು ತಿದ್ದಿಕೊಂಡು ಸುಧಾರಣೆ ಮಾಡಲು ಪ್ರೇರಣೆ … Continue reading ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಜೈನ ಧರ್ಮ ಸಾರ