ಬಂಕಾಪುರ: ಪಟ್ಟಣದ ಅರಳೆಲೆ ಹಿರೇಮಠದ ಲಿಂ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳವರ 51ನೇ ಪುಣ್ಯ ಸ್ಮರಣೋತ್ಸವ ಜ. 25 ರಂದು ಬೆಳಗ್ಗೆ ಶ್ರೀಮಠದ ಪೀಠಾಧಿಪತಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳವರ ಅಪ್ಪಣೆ ಮೇರೆಗೆ ಶ್ರೀ ವೀರಭದ್ರೇಶ್ವರ ಗುಗ್ಗಳ ಮಹೋತ್ಸವ, ಲಿಂ. ರುದ್ರಮುನಿ ಶಿವಾಚಾರ್ಯರ ರಜತ ಉತ್ಸವ ಮೂರ್ತಿಯ ಮೆರವಣಿಗೆ ಸೇರಿ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ಜರುಗಲಿದೆ.
ಸಂಜೆ 5 ಗಂಟೆಗೆ ನಡೆಯಲಿರುವ ಜನ ಜಾಗೃತಿ ಧರ್ಮ ಸಭೆಯ ಸಾನ್ನಿಧ್ಯವನ್ನು ಬಾಳೆಹೊನ್ನೂರಿನ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರು ವಹಿಸುವರು. ಶ್ರೀ ರೇವಣಸಿದ್ದೇಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಹರಗುರು ಚರಮುರ್ತಿಗಳು ಸಮ್ಮುಖ ವಹಿಸುವರು. ಸಚಿವ ಶಿವಾನಂದ ಪಾಟೀಲ ಧರ್ಮಸಭೆ ಉದ್ಘಾಟಿಸುವರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಯಾಸೀರಹಮ್ಮದಖಾನ ಪಠಾಣ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.