More

    ರಂಭಾಪುರಿ ಜಗದ್ಗುರುಗಳ ಧಾರ್ಮಿಕ ಪ್ರವಾಸ

    ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಮಾರ್ಚ್‌ನಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದು, ಇಷ್ಟಲಿಂಗ ಪೂಜೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.

    ಮಾ.1ರಂದು ಸವದತ್ತಿ ತಾಲೂಕಿನ ಹರಳಕಟ್ಟಿಯಲ್ಲಿ ಲಿಂ. ಶ್ರೀ ಸಂಗಮೇಶ್ವರ ಅಜ್ಜನವರ ಪುಣ್ಯಸ್ಮರಣೆ, 2ರಂದು ಸವದತ್ತಿ ತಾಲೂಕಿನ ಹೂಲಿ ಸಾಂಬಯ್ಯನವರ ಮಠದಲ್ಲಿ ಲಿಂ. ಲಿಂಗಮೇಶ್ವರ ಅಜ್ಜನವರ ಸಾಮರಸ್ಯ ಸಮಾರಂಭ, 4ರಂದು ಹುಬ್ಬಳ್ಳಿ ತಾಲೂಕಿನ ಹಳ್ಳಿಯಾಳದಲ್ಲಿ ಶ್ರೀ ನಂದಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. 5ರಂದು ಹರಿಹರ ತಾಲೂಕಿನ ಮಲೇಬೆನ್ನೂರು ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಇಷ್ಟಲಿಂಗ ಮಹಾಪೂಜೆ, 6 ಮತ್ತು 7ರಂದು ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪುರ ಪ್ರವೇಶ ಮತ್ತು ಹಿರೇಮಠದ ನೂತನ ಶ್ರೀಗಳವರ ಗುರು ಪಟ್ಟಾಧಿಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
    8ರಂದು ಬೆಳಗ್ಗೆ 9.30ಕ್ಕೆ ವಿಜಯಪುರ ಜಿಲ್ಲೆ ಹೊರ್ತಿ ಕ್ಷೇತ್ರದಲ್ಲಿ ಇಷ್ಟಲಿಂಗ ಮಹಾಪೂಜೆ, ಸಂಜೆ 6ಕ್ಕೆ ದಕ್ಷಿಣ ಸೊಲ್ಲಾಪುರ ತಾಲೂಕಿನ ಮಾಳಕವಠೆ ಗ್ರಾಮದಲ್ಲಿ ಉತ್ಸವ ಮತ್ತು ಮಹಾಶಿವರಾತ್ರಿ ಸಮಾರಂಭ, 9ರಂದು ಆಳಂದ ತಾಲೂಕಿನ ಚಲಗೇರಾದಲ್ಲಿ ಧರ್ಮ ಜಾಗೃತಿ ಸಮಾರಂಭ, 10ರಂದು ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. 14ರಂದು ಜಗಳೂರು ತಾಲೂಕಿನ ಕೊಡದಗುಡ್ಡ ಕ್ಷೇತ್ರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ಮಾಡಲಿದ್ದಾರೆ.
    20ರಿಂದ 26ರ ವರೆಗೆ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾ ರಥೋತ್ಸವ ಅಂಗವಾಗಿ ವಿವಿಧ ಧರ್ಮ ಸಮಾರಂಭಗಳ ಸಾನ್ನಿಧ್ಯ ವಹಿಸಲಿದ್ದಾರೆ.
    29ರಂದು ಸಕಲೇಶಪುರ ತಾಲೂಕಿನ ಎಸಳೂರಿನಲ್ಲಿ ಲಿಂಗೈಕ್ಯ ಚನ್ನಮಲ್ಲಿಕಾರ್ಜುನ ಶ್ರೀಗಳ ಪುಣ್ಯ ಸ್ಮರಣೋತ್ಸವ ಹಾಗೂ ಇಷ್ಟಲಿಂಗ ಮಹಾ ಪೂಜೆ, 30ರಂದು ಸೊರಬ ತಾಲೂಕಿನ ದುಗ್ಲಿಯಲ್ಲಿ ಜಾತ್ರಾ ಮಹೋತ್ಸವ ಸಮಾರಂಭ ಹಾಗೂ 31ರಂದು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts