More

    ಅನಿರುದ್ಧ್ ರವಿಚಂದರ್ ಜೊತೆಗಿನ ವದಂತಿಯ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್ ಏನು ಹೇಳಿದ್ರು?

    ಮಲಯಾಳಂ ಸಿನಿಮಾ ಮೂಲಕ ಬಾಲನಟಿಯಾಗಿ ನಟಿಸಲು ಆರಂಭಿಸಿದ ಕೀರ್ತಿ ಇಂದು ದಕ್ಷಿಣ ಭಾರತದ ಪ್ರಮುಖ ನಾಯಕಿಯರಲ್ಲಿ ಒಬ್ಬರಾಗಿದ್ದಾರೆ. ನಿರ್ಮಾಪಕ ಜಿ ಸುರೇಶ್ ಕುಮಾರ್ ಹಾಗೂ ನಟಿ ಮೇನಕಾ ಅವರ ಪುತ್ರಿ ಕೀರ್ತಿ ಸ್ಟಾರ್ ಡಮ್ ವಿಷಯದಲ್ಲಿ ತುಂಬಾ ಮುಂದಿದ್ದಾರೆ.


    ಕೀರ್ತಿ ಸುರೇಶ್ ಕೂಡ ಗಾಸಿಪ್ ಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ನಾಯಕಿ. ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತ ಚಿತ್ರರಂಗದಲ್ಲಿ ಕೀರ್ತಿ ಮದುವೆ ಬಗ್ಗೆ ಚರ್ಚೆಯಾಗುತ್ತಿದೆ. ಅನಿರುದ್ಧ್ ಮತ್ತು ಕೀರ್ತಿ ಸುರೇಶ್ ಮದುವೆಯಾಗಲಿದ್ದಾರೆ ಅನ್ನೋದು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ದೊಡ್ಡ ಗಾಸಿಪ್‌.


    ಕೀರ್ತಿ ಮತ್ತು ಅನಿರುದ್ಧ್ ಪ್ರೀತಿಸುತ್ತಿದ್ದಾರೆ ಮತ್ತು ಮದುವೆಯಾಗಲು ಯೋಜಿಸುತ್ತಿದ್ದಾರೆ ಎಂದು ಕೆಲವು ವರದಿಗಳು ಬಂದಿದ್ದವು. ಇದೀಗ ಈ ಗಾಸಿಪ್ ಮತ್ತೆ ಮರುಕಳಿಸುತ್ತಿದೆ. ಜವಾನ್ ಚಿತ್ರದ ಮೂಲಕ ಅನಿರುದ್ಧ್ ಬಾಲಿವುಡ್ ನಲ್ಲಿ ಮಿಂಚುತ್ತಿರುವ ಹೊತ್ತಿನಲ್ಲಿ ಇವರಿಬ್ಬರ ಮದುವೆ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಅನಿರುದ್ಧ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.


    ಇದೀಗ ಈ ವಿಚಾರವಾಗಿ ಕೀರ್ತಿ ಸುರೇಶ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ತಾನು ಮತ್ತು ಅನಿರುದ್ಧ ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ನಿಜವಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಅನಿರುದ್ಧ್ ತಮ್ಮ ಉತ್ತಮ ಸ್ನೇಹಿತ ಮಾತ್ರ ಎಂದು ಕೀರ್ತಿ ಸುರೇಶ್ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts