ಬೆಂಗಳೂರು: ಕಳೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಆಚರಣೆಗೆ ಸಂಬಂಧಿಸಿದಂತೆ ಗಮನ ಸೆಳೆದಿದ್ದ ಬೆಂಗಳೂರಿನ ಚಾಮರಾಜಪೇಟೆಯ ಗುಟ್ಟಹಳ್ಳಿ ಸರ್ವೇ ನಂ. 40ರ ಮೈದಾನದಲ್ಲಿ ಈ ಸಲ ಗಣರಾಜ್ಯೋತ್ಸವ ನಡೆಯಲಿದೆ.
ಜನವರಿ 26ರಂದು ಚಾಮರಾಜಪೇಟೆಯ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ನಡೆಯಲಿದ್ದು, ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಬೇಕೆಂದು ಕಂದಾಯ ಸಚಿವ ಆರ್. ಅಶೋಕ ಆದೇಶ ಹೊರಡಿಸಿದ್ದಾರೆ.
ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!