ಗುರು, ಹಿರಿಯರನ್ನು ಗೌರವಿಸಿ

blank

ಮದ್ದೂರು: ವಿದ್ಯಾರ್ಥಿಗಳು ಶಿಕ್ಷಕರನ್ನು ಹಾಗೂ ಗುರು, ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ಕೊಪ್ಪದ ಸರ್ವೋದಯ ಪ್ರೌಢಶಾಲೆಯ ಅಧ್ಯಕ್ಷ ಬಿ.ವಿವೇಕಾನಂದ ತಿಳಿಸಿದರು.

ತಾಲೂಕಿನ ಕೊಪ್ಪ ಹೋಬಳಿಯ ಕೊಪ್ಪದ ಸರ್ವೋದಯ ಪ್ರೌಢಶಾಲೆಯಲ್ಲಿ 1999-2001 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಂದ ಗುರುವಾರ ಹಮ್ಮಿಕೊಂಡಿದ್ದ ಗುರುವಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಕೊಪ್ಪ ಸರ್ವೋದಯ ಶಾಲೆಯಲ್ಲಿ ಗ್ರಾಮಾಂತರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಉತ್ತಮ ಭವಿಷ್ಯ ರೂಢಿಸಿಕೊಂಡಿರುವುದು ಮೆಚ್ಚುಗೆಯ ವಿಷಯ ಎಂದರು. ಸಂಸ್ಥೆಯ ನಿರ್ದೇಶಕ ಡಿ.ಪಿ.ಸ್ವಾಮಿ ಮಾತನಾಡಿ, ಸರ್ವೋದಯ ವಿದ್ಯಾಸಂಸ್ಥೆಯ ಸಂಸ್ಥಾಪಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಎ.ಡಿ.ಬಿಳಿಗೌಡ ಅವರ 100ನೇ ವರ್ಷದ ಜಯಂತಿ ಅಂಗವಾಗಿ ಎ.ಡಿ.ಬಿಳಿಗೌಡ ಅವರ ಉತ್ಸವ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಇದಕ್ಕೆ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಗುರುವಂದನಾ ಸಮಾರಂಭದಲ್ಲಿ ಸುಮಾರು 24 ಶಿಕ್ಷಕರನ್ನು ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು ಹಾಗೂ ಇದೇ ವೇಳೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಾದ ಎ.ಸಿ.ಉದಯ್ ಆಬಲವಾಡಿ, ಮಂಜು ಹರಳಕೆರೆ, ಪುನೀತ್ ಗುಳೂರು, ತಿಮ್ಮೇಶ್ ಮಾರಂಗೆರೆ, ಸಂದೇಶ್ ಗೌಡಗೆರೆ, ಶಿವಾನಂದ ಮಾಗೋಡ್ನಳ್ಳಿ ಅವರ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಪಾಲ್ಗೊಂಡು ಶಿಕ್ಷಕರನ್ನು ಅಭಿನಂದಿಸಿದರು.

 

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…