ಇಂಗ್ಲೆಂಡ್​ ವಿರುದ್ಧ ಕ್ರಿಕೆಟ್​ ಸರಣಿಯಿಂದ ಕನ್ನಡಿಗ ಕೆಎಲ್​ ರಾಹುಲ್​ಗೆ ರೆಸ್ಟ್​? ಚಾಂಪಿಯನ್ಸ್ ಟ್ರೋಫಿಗೆ ವಾಪಸ್​!

blank

ನವದೆಹಲಿ: ಟೀಮ್​ ಇಂಡಿಯಾ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್​ ರಾಹುಲ್​ಗೆ ಮುಂಬರುವ ಪ್ರವಾಸಿ ಇಂಗ್ಲೆಂಡ್​ ವಿರುದ್ಧದ ಸೀಮಿತ ಓವರ್​ ಕ್ರಿಕೆಟ್​ ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತದೆ. ಆದರೆ ಫೆ.19ರಿಂದ ನಡೆಯಲಿರುವ ಐಸಿಸಿ ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡದಲ್ಲಿ ಸ್ಥಾನ ಕಲ್ಪಿಸಲಾಗುತ್ತದೆ ಎಂದು ವರದಿಯಾಗಿದೆ.

blank

ಆಸ್ಟ್ರೆಲಿಯಾದಲ್ಲಿ ಬಾರ್ಡರ್​-ಗಾವಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯ ಎಲ್ಲ 5 ಪಂದ್ಯಗಳಲ್ಲಿ ಆಡಿರುವ ರಾಹುಲ್​, ಚಾಂಪಿಯನ್ಸ್​ ಟ್ರೋಫಿಗೆ ಮುನ್ನ ಯಾವುದೇ ಪಂದ್ಯ ಆಡುವುದಿಲ್ಲ. ಆದರೆ ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡದಲ್ಲಿ ಅವರು ಪ್ರಮುಖ ಸದಸ್ಯರಾಗಿರುತ್ತಾರೆ ಎನ್ನಲಾಗಿದೆ.
ರಾಹುಲ್​ ಇಂಗ್ಲೆಂಡ್​ ವಿರುದ್ಧ ಸರಣಿಯಿಂದ ವಿಶ್ರಾಂತಿ ಕೇಳಿದ್ದಾರೆ. ಆದರೆ ಚಾಂಪಿಯನ್ಸ್​ ಟ್ರೋಫಿಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

blank

ರಾಹುಲ್​ ಈಗಾಗಲೆ ವಿಜಯ್​ ಹಜಾರೆ ಟ್ರೋಫಿ ದೇಶೀಯ ಏಕದಿನ ಕ್ರಿಕೆಟ್​ ಟೂರ್ನಿಯ ನಾಕೌಟ್​ ಪಂದ್ಯಗಳಿಗೆ ಕರ್ನಾಟಕ ತಂಡದಿಂದಲೂ ವಿಶ್ರಾಂತಿ ಕೇಳಿದ್ದರು. ಆದರೆ ಜನವರಿ 23ರಿಂದ ನಡೆಯಲಿರುವ ರಣಜಿ ಟ್ರೋಫಿ 2ನೇ ಹಂತದ ಪಂದ್ಯಗಳಿಗೆ ಲಭ್ಯರಾಗುವರೇ ಎಂಬುದು ಸ್ಪಷ್ಟವಿಲ್ಲ.

ಖೋಖೋ ವಿಶ್ವಕಪ್​ಗೆ ಕರ್ನಾಟಕದ ಗೌತಮ್​, ಚೈತ್ರಾ ಆಯ್ಕೆ; ಪ್ರತಿಕ್​, ಪ್ರಿಯಾಂಕಾಗೆ ಭಾರತ ತಂಡದ ಸಾರಥ್ಯ

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…