ಬೆಂಗಳೂರು: ಕೃಷಿ ಹಾಗೂ ಕೈಗಾರಿಕೆಗಳ ವಲಸೆ ಕಾರ್ಮಿಕರನ್ನು ಪತ್ತೆ ಮಾಡಿ ಅವರಿಗೆ ವಸತಿ ಹಾಗೂ ಆಹಾರ ಒದಗಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಮಿಕರ ಹೆಸರು, ವಿಳಾಸ ಪತ್ತೆ ಮಾಡಿ ಅವರನ್ನು ನೋಂದಣಿ ಮಾಡಿಕೊಂಡು ಹತ್ತಿರದ ವಸತಿ ಶಾಲೆ, ಸಮುದಾಯ ಭವನ, ಮದುವೆ ಛತ್ರಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ಇಲ್ಲಿ ಅವರಿಗೆ ಶೌಚಾಲಯ, ವಿದ್ಯುತ್, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲ ಸೌಲಭ್ಯ ಒದಗಿಸಬೇಕು. ಪಡಿತರ ವ್ಯವಸ್ಥೆ ಮೂಲಕ ಅವರಿಗೆ ಆಹಾರ ಧಾನ್ಯ ವಿತರಿಸಬೇಕು. ಇದಕ್ಕಾಗಿ ಎಸ್ಡಿಆರ್ಎಫ್ ಅನುದಾನವನ್ನು ಜಿಲ್ಲಾಧಿಕಾರಗಳು ಬಳಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಮಾರುಕಟ್ಟೆ ಸ್ಥಳಾಂತರ: ಕರೊನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಹೀಗಾಗಿ ನಗರ ಹಾಗೂ ಪಟ್ಟಣಗಳಲ್ಲಿ ಇರುವ ಮಾರುಕಟ್ಟೆಗಳನ್ನು ವಿಶಾಲವಾದ ಜಾಗಕ್ಕೆ ವರ್ಗಾಯಿಸಿ ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ದೆಹಲಿಯ ನಿಜಾಮುದ್ದೀನ್ ಜಮಾತ್ ಪ್ರಾರ್ಥನಾ ಮಂದಿರದಲ್ಲಿ ಭಾಗವಹಿಸಿದ್ದವರ ಸಂಖ್ಯೆ ಗೊತ್ತಾದರೆ ಬೆಚ್ಚಿ ಬೀಳುತ್ತೀರಾ!