ನವದೆಹಲಿ: ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿಯಲಿದ್ದಾರೆ. ಈ ಹುದ್ದೆಗೆ ನಾನು ಯಾವುದೇ ಆಸ್ಟ್ರೇಲಿಯಾ ಆಟಗಾರರನ್ನು ಸಂಪರ್ಕಿಸಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಕೊಟ್ಟ ವಿದೇಶಾಂಗ ಇಲಾಖೆ
ಮುಖ್ಯ ಕೋಚ್ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುವ ವರದಿಗಳು ಸಂಪೂರ್ಣವಾಗಿ ಸುಳ್ಳಾಗಿದೆ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶಿಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಜಯ್ ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶತಕೋಟಿ ಅಭಿಮಾನಿಗಳ ಆಕಾಂಕ್ಷೆಗಳನ್ನು ಪೂರೈಸುವುದು ಒಂದು ದೊಡ್ಡ ಗೌರವವಾಗಿದೆ ಮತ್ತು ಭಾರತೀಯ ಕ್ರಿಕೆಟ್ ಅನ್ನು ಮುಂದಕ್ಕೆ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿರುವ ಸರಿಯಾದ ಅಭ್ಯರ್ಥಿಯನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ ಎಂದು ಶಾ ಹೇಳಿದರು.
ನವೆಂಬರ್ 2021 ರಿಂದ ದ್ರಾವಿಡ್ ಕೋಚ್ ಹುದ್ದೆಯನ್ನು ಅಲಂಕರಿಸಿದ್ದು ಜೂನ್ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ. ಈ ಕಾರಣಕ್ಕೆ ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
T20 ವಿಶ್ವಕಪ್ಗಾಗಿ, ಬಹುತೇಕ ಭಾರತೀಯ ಕ್ರಿಕೆಟಿಗರು ಮೇ 25 ರಂದು ನ್ಯೂಯಾರ್ಕ್ಗೆ ತೆರಳಲಿದ್ದಾರೆ. IPL ನ ಫೈನಲ್ನಲ್ಲಿ ಭಾಗವಹಿಸುವವರು ಮೇ 27 ರಂದು ಹೊರಡಲಿದ್ದಾರೆ.
ಮೇ 27 ಸಂಜೆ 6 ಗಂಟೆಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಸುಲಕ್ಷಣಾ ನಾಯ್ಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಂಜಪೇ ಅವರನ್ನು ಒಳಗೊಂಡ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯು ನೂತನ ಕೋಚ್ ಆಯ್ಕೆ ವಿಚಾರದಲ್ಲಿ ಬಿಸಿಸಿಐಗೆ ನೆರವಾಗಲಿದೆ.
ರಿಕ್ಕಿ ಪಾಟಿಂಗ್ ಏನ್ ಹೇಳಿದ್ರು ?: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖ್ಯ ಕೋಚ್ ಆಗಿ ಕೆಲಸ ಮಾಡಿದ್ದ ರಿಕಿ ಪಾಂಟಿಂಗ್, ಇತ್ತೀಚಿನ ಸಂದರ್ಶನ ಒಂದರಲ್ಲಿ ತಮಗೆ ಭಾರತ ತಂಡದ ಮುಖ್ಯ ಕೋಚ್ ಆಗಲು ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ನಿಟ್ಟಿನಲ್ಲಿ ಬಿಸಿಸಿಐ ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗುವ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿರುವುದನ್ನು ಗಮನಿಸಿದ್ದೇನೆ. ನನ್ನ ಅರಿವಿಗೆ ಇಲ್ಲದೆ ಈ ರೀತಿಯ ಸುದ್ದಿಗಳು ಹೇಗೆ ಆನ್ಲೈನಲ್ಲಿ ಇಷ್ಟು ಬೇಗ ಹರಿದಾಡುತ್ತವೆ ಎಂಬುದೇ ಅರ್ಥವಾಗಲಿಲ್ಲ. ಐಪಿಎಲ್ ಟೂರ್ನಿ ವೇಳೆ ಕೆಲ ಗುಪ್ತ ಆಲೋಚನೆ ನಡೆಸಲಾಯಿತು. ಭಾರತ ತಂಡದ ಕೋಚ್ ಆಗುವ ಆಸಕ್ತಿ ಇದೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳಲಾಯಿತು,” ಎಂದು ಐಸಿಸಿಗೆ ನೀಡಿರುವ ಸಂದರ್ಶನದಲ್ಲಿ ರಿಕಿ ಪಾಂಟಿಂಗ್ ಹೇಳಿಕೊಂಡಿದ್ದಾರೆ.
ಆರ್ಸಿಬಿ ಸೋತಿದ್ದು ನನಗೆ… ಟೀಕಾ ಪ್ರಹಾರದ ನಡುವೆ ಆಸ್ಟ್ರೇಲಿಯಾದ ಮಾಜಿ ಆಟಗಾರನ ಹೇಳಿಕೆ ವೈರಲ್