ಚಿಕ್ಕಬಳ್ಳಾಪುರ: ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಸಮೀಪ ತಡರಾತ್ರಿ ಒಂದು ಗಂಟೆ ಸುಮಾರಿಗೆ ಲಾರಿ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಹೈದರಾಬಾದ್ಗೆ ಹೋಗುತ್ತಿದ್ದ ಕಾರಿನಲ್ಲಿ ಒಂದೇ ಕುಟುಂಬ ನಾಲ್ವರು ಇದ್ದರು. ಈ ಪೈಕಿ ಮಹಿಳೆ ಮತ್ತು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ಹಿರಿಯ ಪುರುಷರೊಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೂಡಲೇ ತುರ್ತುಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಹಸಿರು ಬಣ್ಣಕ್ಕೆ ತಿರುಗಿದ ಕಡಲು, ಸುರತ್ಕಲ್ ಸಮುದ್ರ ತೀರದಲ್ಲಿ ಗೋಚರ
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವ ಮಾದರಿಯ ಕಾರು ಎಂಬುದನ್ನೂ ಗುರುತಿಸಲಾಗದಷ್ಟು ಹಾನಿಗೀಡಾಗಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹದಿನೇಳು ವರ್ಷಗಳ ಅವಧಿಯಲ್ಲೇ ಗರಿಷ್ಠ ಕದನವಿರಾಮ ಉಲ್ಲಂಘನೆ ಮಾಡಿದ ಪಾಕ್