ತೇಪೆ ಕಾಮಗಾರಿಗೆ ತಡೆಯೊಡ್ಡಿದ ಜನತೆ! :ಸಂಪೂರ್ಣ ಹದಗೆಟ್ಟ ಕಡಬಪಂಜ ರಸ್ತೆ : ಸುಸಜ್ಜಿತ ರಸ್ತೆಗಾಗಿ ಹಲವು ಬಾರಿ ಮನವಿ

blank

ಕಡಬ: ಕಡಬಪಂಜ ಸಂಪರ್ಕ ರಸ್ತೆಯಲ್ಲಿ ಉಂಟಾದ ಹೊಂಡಗಳಿಗೆ ಬುಧವಾರ ಡಾಮರು ತೇಪೆ ಹಾಕುವ ಕಾಮಗಾರಿಗೆ ಸಾರ್ವಜನಿಕರು ತಡೆಯೊಡ್ಡಿ, ಗುತ್ತಿಗೆದಾರ, ಸಂಬಂಧಪಟ್ಟ ಇಂಜಿನಿಯರ್ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸುವಂತೆ ಆಗ್ರಹಿಸಿದ ಘಟನೆ ಬುಧವಾರ ನಡೆದಿದೆ.

ಕಡಬಪಂಜ ರಸ್ತೆಯ ಕಡಬದಿಂದ ಕೋಡಿಂಬಾಳ ತನಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಬಹದಾಕಾರದ ಹೊಂಡ ನಿರ್ಮಾಣವಾಗಿದೆ. ದಿನಂಪ್ರತಿ ಹಲವಾರು ಸರ್ಕಾರಿ ಬಸ್‌ಗಳು ಸೇರಿದಂತೆ ನೂರಾರು ವಾಹನ ಓಡಾಟ ಇರುವ ಈ ರಸ್ತೆಯನ್ನು ಪೂರ್ತಿಯಾಗಿ ಅಭಿವೃದ್ಧಿಪಡಿಸುವಂತೆ ಹಲವು ಬಾರಿ ಸಾರ್ವಜನಿಕರು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರು. ಆದರೆ ಅನುದಾನದ ಕೊರತೆ ಇರುವುದರಿಂದ ಸದ್ಯಕ್ಕೆ ರಸ್ತೆಯ ಹೊಂಡ ಮುಚ್ಚಿ ಡಾಂಬರು ತೇಪೆ ಹಾಕುವ ಕಾರ್ಯವನ್ನು ಲೊಕೋಪಯೋಗಿ ಇಲಾಖೆಯ ಮೂಲಕ ಬುಧವಾರ ಬೆಳಗ್ಗೆ ಆರಂಭಿಸಲಾಗಿತ್ತು.

ಕೋಡಿಂಬಾಳದ ಕಲ್ಲಂತಡ್ಕದ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ ಮಾಲೀಕ ಸಂಘದವರು, ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ತೇಪೆ ಕಾಮಗಾರಿ ನಡೆಸುವುದು ಬೇಡ. ಕಳೆದ ವರ್ಷ ನಡೆಸಿದ ತೇಪೆ ಕಾಮಗಾರಿ ಕಳಪೆಯಾಗಿದ್ದುದರಿಂದ ಕೆಲವೇ ದಿನಗಳಲ್ಲಿ ಡಾಂಬರು ಎದ್ದುಹೋಗಿ ರಸ್ತೆ ಸಂಪೂರ್ಣ ಹಾಳಾಗಿತ್ತು. ಈ ಬಾರಿಯೂ ಮತ್ತೆ ಅದೇ ರೀತಿ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ.ಮಾಡುವುದಿದ್ದರೆ ಸಮರ್ಪಕ ರೀತಿಯಲ್ಲಿ ಕಾಮಗಾರಿ ನಡೆಸಬೇಕು. ಗುತ್ತಿಗೆದಾರ ಹಾಗೂ ಇಂಜಿನಿಯರ್ ಸ್ಥಳದಲ್ಲಿದ್ದು, ಕಾಮಗಾರಿ ನಡೆಸಬೇಕು ಎಂದು ಆಗ್ರಹಿಸಿ ಕಾಮಗಾರಿ ನಡೆಸದಂತೆ ತಡೆಯೊಡ್ಡಿದ ಪರಿಣಾಮವಾಗಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ತೆರಳಿದ ಘಟನೆ ನಡೆಯಿತು.

ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ ಆರಂಭ

ಒಂದು ಗಂಟೆ ಹೆಚ್ಚು ಕೆಲಸ : ಎಸ್.ಎಂ ಕೃಷ್ಣಗೆ ಸೇವೆಯ ಮೂಲಕ ಗೌರವಾರ್ಪಣೆ

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…