More

    ರಸ್ತೆ ಸುರಕ್ಷತಾ ಜಾಗೃತಿಗಾಗಿ ರ‍್ಯಾಲಿ

    ಹುಬ್ಬಳ್ಳಿ : ಇಲ್ಲಿನ ಗೋಕುಲ ರಸ್ತೆಯ ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿನಲ್ಲಿ ರಸ್ತೆ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಷ್ಟಿ್ರಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ಮತ್ತು ಕಾರ್ ರ್ಯಾಲಿಗೆ ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

    ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ, ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆ.ಎಲ್.ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಮತ್ತು ಹುಬ್ಬಳ್ಳಿ- ಧಾರವಾಡ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಹುಬ್ಬಳ್ಳಿ ಸಹಯೋಗದೊಂದಿಗೆ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.

    ಜಂಟಿ ಸಾರಿಗೆ ಆಯುಕ್ತ ಓಂಕಾರೇಶ್ವರಿ ಎಂ.ಪಿ., ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ, ಭೀಮನಗೌಡ ಪಾಟೀಲ, ಕೆಎಲ್ ಇ ಐಟಿ ಪ್ರಾಚಾರ್ಯ ಪ್ರೊ. ಶರದ ಜೋಶಿ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ ಅಧ್ಯಕ್ಷ ಡಾ.ನಾಗರಾಜ ಶೆಟ್ಟಿ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ ಕಾರ್ಯದರ್ಶಿ ಪ್ರಕಾಶ ಇರಕಲ್ಲ, ಇವೆಂಟ್ ಚೇರ್ಮನ್ ಶಂಕರ ಹಿರೇಮಠ ಹಾಗೂ ಇತರರು ಉಪಸ್ಥಿತರಿದ್ದರು.

    ಗೋಕುಲ ರಸ್ತೆಯ ಕೆ.ಎಲ್.ಇ. ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿದ್ಯಾನಗರದ ಬಿವಿಬಿ ಕಾಲೇಜು ಕ್ಯಾಂಪಸ್​ವರೆಗೆ ಬೈಕ್ ಮತ್ತು ಕಾರ್ ರ‍್ಯಾಲಿ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts