More

    ಕೊಳ್ಳೇಗಾಲದಲ್ಲೂ ರಸ್ತೆ ಸಂಚಾರ ತಡೆ

    ಕೊಳ್ಳೇಗಾಲ: ಪಟ್ಟಣದ ಮುಡಿಗುಂಡ ಸೇತುವೆ ಬಳಿ ಬುಧವಾರ ರೈತ ಸಂಘದ ಪದಾಧಿಕಾರಿಗಳು ರಸ್ತೆ ಸಂಚಾರ ನಡೆ ನಡೆಸಿ ಪ್ರತಿಭಟಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡುಪ್ರಾಣಿಗಳ ಹಾವಳಿಯಿಂದ ರೈತರ ಬೆಳೆ ನಾಶವಾಗುತ್ತಿದೆ. ಜನಸಾಮಾನ್ಯರು ಭಯದಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಹನೂರು ತಾಲೂಕಿನ ಲೊಕ್ಕನಹಳ್ಳಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ರೈತರು ಧರಣಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಸಹ ಭೇಟಿ ನೀಡಿಲ್ಲ. ಜನಪ್ರತಿನಿಧಿಗಳು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಹೋರಾಟ ನಡೆಸಲಾಗುವುದು. ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಗುರುವಾರ ನಡೆಯಲಿರುವ ಗಡಿನಾಡ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರಲು ಬಿಡುವುದಿಲ್ಲ. ನ್ಯಾಯ ಸಿಗುವವರೆಗೂ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

    ರೈತ ಸಂಘದ ಪ್ರಕಾಶ್, ಮುಳ್ಳೂರು ವಿರೂಪಾಕ್ಷ, ಕುಣಗಳ್ಳಿ ಶಂಕರ್, ಮುಳ್ಳೂರು ಪವನ್, ಬಾನು ಹೊನ್ನೂರು, ನಂಜುಂಡಸ್ವಾಮಿ, ಮುಳ್ಳೂರು ಸೋಮಣ್ಣ, ಬಸವಣ್ಣ, ಮಾದಪ್ಪ, ದೀಪು, ವೀರಭದ್ರಸ್ವಾಮಿ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts