ಬೆಂಗಳೂರು: ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ರೌಡಿಶೀಟರ್ ಸ್ಲಂ ಭರತ ಕನ್ನಡದ ಹೆಸರಾಂತ ನಟರಾದ ಯಶ್ ಹಾಗೂ ದುನಿಯಾ ವಿಜಿ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದಲ್ಲಿ ಬಂಧಿತನಾದ ರೌಡಿಶೀಟರ್ ಸ್ಲಂ ಭರತ ಪೊಲೀಸರ ವಿಚಾರಣೆ ವೇಳೆ ಈ ವಿಷಯ ತಿಳಿಸಿದ್ದಾನೆ ಎಂದು ಡಿಸಿಪಿ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಆದರೆ ಸಿನಿಮಾ ನಟರ ಹತ್ಯೆ ಸಂಚು ರೂಪಿಸಿದ್ದ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಬೇರೆ ವಿಭಾಗಗಳಲ್ಲಿ ಈ ಬಗ್ಗೆ ಚರ್ಚೆ ನಡೆದಿರಬಹುದು. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.
ದೊಡ್ಡ ನಟರ ಹತ್ಯೆ ಮಾಡಿ ರಾಷ್ಟ್ರದ ನಂ.1 ಡಾನ್ ಆಗಬೇಕು ಎನ್ನುವ ಆಕಾಂಕ್ಷೆಯನ್ನು ಆತ ಹೊಂದಿದ್ದ. ಹೀಗಾಗಿ ಪ್ರಮುಖ ನಟರ ಹತ್ಯೆಗೆ ಸಂಚು ರೂಪಿಸಿದ್ದ ಎನ್ನುವ ವಿಚಾರವನ್ನು ಆತ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. (ದಿಗ್ವಿಜಯ ನ್ಯೂಸ್)