ಬೆಂಗಳೂರು: ತನ್ನ ಹದಿನೆಂಟನೆಯ ವಯಸ್ಸಿನಲ್ಲಿ ಕೊಲೆಯೊಂದನ್ನು ಮಾಡಿ ಜೈಲುಪಾಲಾಗಿದ್ದವ, ಇದೀಗ ತನ್ನ 36ನೇ ವಯಸ್ಸಿನಲ್ಲೇ ಕೊಲೆಯಾಗಿ ಹೋಗಿದ್ದಾನೆ. ಇದು ಇಂದು ರಾತ್ರಿಯಷ್ಟೇ ಬರ್ಬರವಾಗಿ ಕೊಲೆಯಾಗಿರುವ ರೌಡಿಶೀಟರ್ ಜೆ.ಸಿ.ಆನಂದ್ ಎಂಬಾತನ ಪಾಪಕೂಪದ ಕಿರುಪರಿಚಯ.
ಪೀಣ್ಯ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಜೆ.ಸಿ. ಆನಂದ್ ಇಂದು ರಾತ್ರಿ 8 ಗಂಟೆ ಸುಮಾರಿಗೆ ಅದೇ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಕೊಲೆಗೀಡಾಗಿದ್ದಾನೆ. ಬೈಕ್ನಲ್ಲಿ ಬಂದಿದ್ದ ಐದಾರು ಮಂದಿ ಆತನನ್ನು ಸುತ್ತುವರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಐಸಿಸ್ ಲಿಂಕ್ ಹೊಂದಿದ್ದ ಬೆಂಗಳೂರು ನಿವಾಸಿಯ ಬಂಧನ; ನಿಷೇಧಿತ ಸಂಘಟನೆಗಳ ಜತೆ ನಿರಂತರ ಸಂಪರ್ಕ ಹೊಂದಿದ್ದ ತಾಖಿರ್
ಜೆ.ಸಿ. ಆನಂದ್ ತನ್ನ 18ನೇ ವಯಸ್ಸಿನಲ್ಲಿ ಅಪ್ಪಿ ಎಂಬಾತನನ್ನು ಕೊಲೆ ಮಾಡಿ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡು ಜೈಲುಪಾಲಾಗಿದ್ದ. ಬಳಿಕ ಜೈಲಿಂದ ಹೊರಬಂದಿದ್ದ ಈತ 2016ರಲ್ಲಿ ಜೆಡಿಎಸ್ ಲೀಡರ್ ಆಗಿ ಗುರುತಿಸಿಕೊಂಡಿದ್ದ.
ಅಪಹರಣ ಪ್ರಕರಣವೊಂದರಲ್ಲಿ ಕೆಲವು ದಿನಗಳ ಹಿಂದೆ ಜೈಲುಪಾಲಾಗಿದ್ದ ಈತ ಮೂರು ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ. ಆದರೆ ಇಂದು ಕೆಲವು ದುಷ್ಕರ್ಮಿಗಳುನ್ನು ಈತನನ್ನು ಕೊಲೆ ಮಾಡಿ ಈ ಲೋಕದಿಂದಲೇ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಬರ್ಬರವಾಗಿ ಕೊಲೆಯಾಗಿ ಹೋದ ರೌಡಿಶೀಟರ್; ಬೈಕ್ನಲ್ಲಿ ಬಂದವರು ಮಾರಕಾಸ್ತ್ರಗಳಿಂದ ಕೊಚ್ಚಿಕೊಂದರು..
ಪರಿಚಿತರೇ ಹಳೇ ದ್ವೇಷದಿಂದ ಈ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ವಿನಾಯಕ ವಸಂತ್ ರಾವ್ ಪಾಟೀಲ್, ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
‘ನನ್ನ ಹಾಗೂ ಮಗು ಲೈಫ್ ಹಾಳು ಮಾಡಿದ್ದಿ’ ಎಂದು ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿ, 6 ತಿಂಗಳ ಮಗು ಜತೆ ನದಿಗೆ ಹಾರಿದ ತಾಯಿ!
ಹೆಂಡತಿಗೆ ಹೈ-ಡೋಸ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ ವೈದ್ಯ!; ಮದ್ಯಪಾನ, ಜೂಜು, ವಾಮಾಚಾರಗಳಲ್ಲೂ ತೊಡಗಿದ್ದ ಡಾಕ್ಟರ್