18 ವರ್ಷಕ್ಕೆ ಕೊಲೆ ಮಾಡಿದ್ದವ 36 ವರ್ಷಕ್ಕೇ ಕೊಲೆಯಾಗಿ ಹೋದ; ಜೈಲಿಂದ ಬಿಡುಗಡೆಯಾದ ಮೂರೇ ದಿನದಲ್ಲಿ ಈ ಲೋಕದಿಂದಲೇ ಬಿಡುಗಡೆ!

ಬೆಂಗಳೂರು: ತನ್ನ ಹದಿನೆಂಟನೆಯ ವಯಸ್ಸಿನಲ್ಲಿ ಕೊಲೆಯೊಂದನ್ನು ಮಾಡಿ ಜೈಲುಪಾಲಾಗಿದ್ದವ, ಇದೀಗ ತನ್ನ 36ನೇ ವಯಸ್ಸಿನಲ್ಲೇ ಕೊಲೆಯಾಗಿ ಹೋಗಿದ್ದಾನೆ. ಇದು ಇಂದು ರಾತ್ರಿಯಷ್ಟೇ ಬರ್ಬರವಾಗಿ ಕೊಲೆಯಾಗಿರುವ ರೌಡಿಶೀಟರ್ ಜೆ.ಸಿ.ಆನಂದ್ ಎಂಬಾತನ ಪಾಪಕೂಪದ ಕಿರುಪರಿಚಯ. ಪೀಣ್ಯ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಜೆ.ಸಿ. ಆನಂದ್​ ಇಂದು ರಾತ್ರಿ 8 ಗಂಟೆ ಸುಮಾರಿಗೆ ಅದೇ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಕೊಲೆಗೀಡಾಗಿದ್ದಾನೆ. ಬೈಕ್​ನಲ್ಲಿ ಬಂದಿದ್ದ ಐದಾರು ಮಂದಿ ಆತನನ್ನು ಸುತ್ತುವರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. … Continue reading 18 ವರ್ಷಕ್ಕೆ ಕೊಲೆ ಮಾಡಿದ್ದವ 36 ವರ್ಷಕ್ಕೇ ಕೊಲೆಯಾಗಿ ಹೋದ; ಜೈಲಿಂದ ಬಿಡುಗಡೆಯಾದ ಮೂರೇ ದಿನದಲ್ಲಿ ಈ ಲೋಕದಿಂದಲೇ ಬಿಡುಗಡೆ!