ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳು ಉಪಚುನಾವಣೆಯ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲ ಪಕ್ಷಗಳ ನಾಯಕರು ತೊಡಗಿಕೊಂಡಿದ್ದಾರೆ.
ಆಡಳಿತಾ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಿಗೆ ಉಪಚುನಾವಣೆ ಮುಂದಿನ ರಾಜಕೀಯದ ಭವಿಷ್ಯದ ಪರೀಕ್ಷೆಯಾಗಿದ್ದು, ಮೂರು ಪಕ್ಷಗಳು ಚುನಾವಣೆ ಗೆಲುವಿಗೆ ತಂತ್ರಗಳನ್ನು ಎಣೆಯುತ್ತಿದ್ದಾರೆ.
ರಾಜ್ಯ ಬಿಜೆಪಿ ಕಮಿಟಿಯು ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಮುನಿರತ್ನ ಮತ್ತು ಮುನಿರಾಜುಗೌಡ ಹೆಸರು ಶಿಫಾರಸು ಮಾಡಿದೆ. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನದ ಭಾಗವಾಗಿದ್ದ ಮುನಿರತ್ನಗೆ ಬಿಜೆಪಿ ಟಿಕೆಟ್ ಬಹುತೇಕ ಖಚಿತವಾಗಿದೆ.
ಇದನ್ನೂ ಓದಿ: ಕರೊನಾ ನಿಯಮ, ನಿಷೇಧಾಜ್ಞೆ ಉಲ್ಲಂಘಿಸಿ ದೌಡು- ಎಫ್ಐಆರ್ ಸುಳಿಗೆ ರಾಹುಲ್, ಪ್ರಿಯಾಂಕಾ
ಇನ್ನು ಕಾಂಗ್ರೆಸ್ಗೆ ಶಕ್ತಿಯುವ ಅಭ್ಯರ್ಥಿಯ ಕೊರತೆ ಇದೆ. ಇತ್ತ ಡಿ.ಕೆ. ರವಿ ಮಾವ ಹಾಗೂ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷದ ನಾಯಕರ ಜತೆ ಮಾತುಕತೆ ನಡೆಸುತ್ತಿದ್ದು, ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ.
ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪ ಮಗಳು ಕುಸುಮಾರನ್ನು ಕಾಂಗ್ರೆಸ್ ಅಭ್ಯರ್ಥಿ ಮಾಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಒಲವಿದೆ ಎನ್ನಲಾಗಿದ್ದು, ಮುನಿರತ್ನ ವಿರುದ್ಧ ಮಹಿಳೆಯನ್ನು ಕಣಕ್ಕೆ ಇಳಿಸುವ ತಂತ್ರ ಎಣೆಯುತ್ತಿದ್ದಾರೆಂಬ ವಿಚಾರ ತಿಳಿದುಬಂದಿದೆ.
ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾದ್ರೆ, ಕಣಕ್ಕೆ ಇಳಿಯಲು ಮಾಗಡಿ ಬಾಲಕೃಷ್ಣ ಹಿಂದೇಟು ಹಾಕಿದ್ದಾರೆ. ಇತ್ತ ರಕ್ಷಾ ರಾಮಯ್ಯ ಪರ ಪರಮೇಶ್ವರ್ ಬ್ಯಾಟ್ ಬೀಸಿದ್ದು, ಮುನಿರತ್ನ ವಿರುದ್ಧ ಸ್ಪರ್ಧೆ ಮಾಡಲು ಬಹುತೇಕ ಕೈ ಆಕಾಂಕ್ಷಿಗಳು ಹಿಂದೇಟು ಹಾಕುತ್ತಿದ್ದಾರೆ. ಮುನಿರತ್ನ ಆದ್ರೆ ಹಣದ ತೊಂದರೆ ಆಗಲಿದೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೇಳಿದ್ದಾರೆನ್ನಲಾಗಿದೆ. (ದಿಗ್ವಿಜಯ ನ್ಯೂಸ್)
ಟಿಕ್ಟಾಕ್ ಸ್ಟಾರ್ ಲೈವ್ ಶೋ ನಡುವೆಯೇ ಮನೆಗೆ ನುಗ್ಗಿದ ಮಾಜಿ ಪತಿಯಿಂದ ನಡೆಯಿತು ಭೀಕರ ಕೃತ್ಯ..!