ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಅವರಿಬ್ಬರಿಗೂ ಈಗ ಆರ್ಎಸ್ಎಸ್ ಶಿಬಿರಕ್ಕೆ ಬರುವಂತೆ ಕೋರಿ ಆಹ್ವಾನ ಕಳಿಸಲಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಅ.17ರಿಂದ ಏಳು ದಿನಗಳ ಕಾಲ ಆರ್ಎಸ್ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಶಿಬಿರ ನಡೆಯಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಬಿರದಲ್ಲಿ ಪಾಲ್ಗೊಂಡು ಆರ್ಎಸ್ಎಸ್ನ ಮಹತ್ವ ತಿಳಿದುಕೊಳ್ಳಿ. ಆರ್ಎಸ್ಎಸ್ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತದೆ. ಏಳು ದಿನಗಳಲ್ಲಿ ನಿಮ್ಮನ್ನು ಪರಿಪೂರ್ಣವಾಗಿ ಗಟ್ಟಿಗೊಳಿಸಿ ಈ ದೇಶಕ್ಕೆ ಹಾಗೂ ಸಮಾಜಕ್ಕೆ ನಿಮ್ಮನ್ನು ಆರ್ಎಸ್ಎಸ್ ಅರ್ಪಣೆ ಮಾಡುತ್ತದೆ ಎಂದು ಪತ್ರಮುಖೇನ ಕರೆಯಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮತ್ತಷ್ಟು ಬಿರುಸು; ನಾಳೆ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್..
ಶಿಬಿರಕ್ಕೆ ಬರುವಾಗ ತಟ್ಟೆ, ಲೋಟ, ಬೆಡ್ಶೀಟ್, ಜಮಕಾನ ಹಾಗೂ ಎರಡು ಜೊತೆ ಬಟ್ಟೆ ತೆಗೆದುಕೊಂಡು ಬನ್ನಿ. ಅದರಲ್ಲೂ ಆರ್ಎಸ್ಎಸ್ ಗಣವೇಷದಲ್ಲಿ ಶಿಬಿರದಲ್ಲಿ ಪಾಲ್ಗೊಂಡು, ಬಳಿಕ ಆರ್ಎಸ್ಎಸ್ ಬಗ್ಗೆ ಮಾತನಾಡಿ ಎಂದು ಆರ್ಎಸ್ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಇಬ್ಬರೂ ಮಾಜಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.
ಮನೆ ಬೀಗ-ಬಾಗಿಲು ಮುರಿಯದೆ, ಕನ್ನ ಹಾಕದೆ ಕಳವು ಮಾಡುತ್ತಿದ್ದ ಕಳ್ಳನ ಬಂಧನ; ಸಂಬಂಧಿಕರ ಮನೆಯನ್ನೂ ಬಿಡಲಿಲ್ಲ..