ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಪವಿತ್ರ ರಾಮಮಂದಿರಕ್ಕೆ ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದಷ್ಟು ಕಾಣಿಕೆಯನ್ನು ಸಲ್ಲಿಸುತ್ತಿದ್ದಾರೆ.
ಜನವರು 22 ರಂದು ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಮುಸ್ಲಿಮರು ಮಸೀದಿ ಮತ್ತು ದರ್ಗಾಗಳಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಬೇಕು ಎಂದು ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಭಾನುವಾರ ನಡೆದ ರಾಮಮಂದಿರ, ರಾಷ್ಟ್ರ ಮಂದಿರ್-ಎ ಹೆರಿಟೇಜ್ ಪುಸ್ತಕ ಬಿಡುಗಡೆ ಬಳಿಕ ಮಾತನಾಡಿದ ಇಂದ್ರೇಶ್ ಕುಮಾರ್, ಶೇ. 99 ಪ್ರತಿಶತದಷ್ಟು ಮುಸ್ಲಿಮರು ಮತ್ತು ಇತರ ಹಿಂದೂಗಳಲ್ಲದವರು ದೇಶಕ್ಕೆ ಸೇರಿದವರುನಮಗೆ ಸಾಮಾನ್ಯ ಪೂರ್ವಜರಿರುವುದರಿಂದ ಅವರು ಹಾಗೆ ಮುಂದುವರಿಯುತ್ತಾರೆ. ಅವರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ, ದೇಶವನ್ನಲ್ಲ ಎಂದಿದ್ದಾರೆ.
ಇದನ್ನೂ ಓದಿ: ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ; ಕಾರಣ ಹೀಗಿದೆ
ಇಸ್ಲಾಂ, ಕ್ರಿಶ್ಚಿಯನ್, ಸಿಖ್ಅಥವಾ ಇನ್ನಾವುದೇ ಧರ್ಮವನ್ನು ಆಚರಿಸುವ ಜನರು ‘ಶಾಂತಿ, ಸೌಹಾರ್ದತೆ ಮತ್ತು ಭ್ರಾತೃತ್ವ’ಕ್ಕಾಗಿ ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅಯೋಧ್ಯೆಯ ಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ನಾವೆಲ್ಲರೂ ಈ ದೇಶದವರು, ವಿದೇಶಿಯರೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಮಸೀದಿ, ದರ್ಗಾ ಅಲ್ಲದೇ ಗುರುದ್ವಾರಗಳು, ಚರ್ಚ್ಗಳು ಮತ್ತು ಎಲ್ಲಾ ಧಾರ್ಮಿಕ ಸ್ಥಳಗಳು ತಮ್ಮ ಇಬಾದತ್ ಗಾಹ್ ಮತ್ತು ಪ್ರಾರ್ಥನಾ ಮಂದಿರಗಳನ್ನು ಜನವರಿ 22 ರಂದು 11-2 ಘಂಟೆಯ ನಡುವೆ ಭವ್ಯವಾಗಿ ಅಲಂಕರಿಸಲು ಮತ್ತು ದೊಡ್ಡ ಪರದೆಯಲ್ಲಿ ಕಾರ್ಯಕ್ರಮವನ್ನು ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿದವನು ಎಂದು ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಹೇಳಿದ್ದಾರೆ.