More

    ಪ್ರೆಸ್​​ ಕೌನ್ಸಿಲ್ ಆಫ್ ಇಂಡಿಯಾ ಪ್ರಶಸ್ತಿ ಸ್ವೀಕರಿಸಿದ ವಿಜಯವಾಣಿಯ ರುದ್ರಣ್ಣ ಹರ್ತಿಕೋಟೆ

    ಬೆಂಗಳೂರು: ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಉತ್ಕೃಷ್ಟ ಪತ್ರಿಕೋದ್ಯಮದ ರಾಷ್ಟ್ರೀಯ ಪ್ರಶಸ್ತಿಯನ್ನು ವಿಜಯವಾಣಿಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಇಂದು ದೆಹಲಿಯಲ್ಲಿ ಸ್ವೀಕರಿಸಿದರು.

    ನವದೆಹಲಿಯ ಕಾನ್​ಸ್ಟಿಟ್ಯೂಷನ್ ಕ್ಲಬ್​ ಆಫ್ ಇಂಡಿಯಾದ ಡೆಪ್ಯುಟಿ ಸ್ಪೀಕರ್ ಹಾಲ್​ನಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

    ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

    ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ ವಿಜಯವಾಣಿಯಲ್ಲಿ 2019ರ ಮೇ 22ರಂದು ಪ್ರಕಟವಾದ ರುದ್ರಣ್ಣ ಹರ್ತಿಕೋಟೆ ಅವರ ವರದಿ ಹಿನ್ನೆಲೆಯಲ್ಲಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಿಸಿಐ ತಿಳಿಸಿದೆ. ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ-2020ರ ಪ್ರಶಸ್ತಿಗೆ ರುದ್ರಣ್ಣ ಆಯ್ಕೆಯಾಗಿದ್ದನ್ನು ಪಿಸಿಐ ಫೆ. 7ರಂದು ಘೋಷಿಸಿತ್ತು.

    ಆಪ್​ನಿಂದ ಬಿಜೆಪಿಗೆ ಮಾಜಿ ಪೊಲೀಸ್ ಕಮಿಷನರ್​; ನಾಳೆಯೇ ಪಕ್ಷಾಂತರ ಆಗಲಿರುವ ಭಾಸ್ಕರ್ ರಾವ್​

    ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts