ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಕೆ ಸಿಕ್ಕಾಪಟ್ಟೆ ಚಾಲ್ತಿಯಲ್ಲಿದ್ದು, ನೋಡುಗರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ದೇಶ-ವಿದೇಶಗಳನ್ನು ಸುತ್ತಾಡುವ ಅದೆಷ್ಟೋ ಯೂಟ್ಯೂಬರ್ಗಳು ಪ್ರಪಂಚದ ಮೂಲೆ ಮೂಲೆಗಳನ್ನು ಅನ್ವೇಷಿಸಿ, ಅಲ್ಲಿನ ವಿಶೇಷತೆಗಳನ್ನು ತಮ್ಮ ಫಾಲೋವರ್ಸ್ಗಳೊಂದಿಗೆ ಹಂಚಿಕೊಳ್ಳುತ್ತಾರೆ. ಇದೇ ರೀತಿ ರಷ್ಯಾದಿಂದ ಭಾರತಕ್ಕೆ ಬಂದ ಚೆಲುವೆಯೊಬ್ಬರು, ದೆಹಲಿ ವಿಮಾನ ನಿಲ್ದಾಣದಲ್ಲಿ ತಮಗೆ ಎದುರಾದ ಮುಜುಗರದ ಘಟನೆಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲರ ಮುಂದೆ ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಚಂಚಲ ಮನಸಿನ ಬದ್ಧತೆ ಇಲ್ಲದ ವ್ಯಕ್ತಿ
ರಷ್ಯಾ ಮೂಲದ ಕಂಟೆಂಟ್ ಕ್ರಿಯೇಟರ್ ಆದ ಈ ಮಹಿಳೆ, ಕೆಲವು ದಿನಗಳ ಹಿಂದೆಯಷ್ಟೇ ಭಾರತ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಇಂಡಿಯಾ ಟೂರ್ ಮುಗಿಸಿ, ತನ್ನ ದೇಶಕ್ಕೆ ಹಿಂತಿರುಗುವಾಗ ಆಕೆ ತನ್ನ ವಿಮಾನಕ್ಕಾಗಿ ದೆಹಲಿ ಏರ್ಪೋರ್ಟ್ನಲ್ಲಿ ಕಾಯುತ್ತಿದ್ದರು. ಆಗ ಅಲ್ಲಿನ ಪಾಸ್ಪೋರ್ಟ್ ಕಂಟ್ರೋಲ್ ಅಧಿಕಾರಿ ತನ್ನ ಟಿಕೆಟ್ ಮೇಲೆ ಅವರ ಮೊಬೈಲ್ ನಂಬರ್ ಬರೆದು, ಮುಂದಿನ ಬಾರಿ ಇಂಡಿಯಾಗೆ ಬಂದಾಗ ನನ್ನನ್ನು ಸಂಪರ್ಕಿಸಿ ಎಂದು ಹೇಳಿರುವುದಾಗಿ ಆಕೆ ವಿಡಿಯೋದಲ್ಲಿ ತಿಳಿಸಿದ್ದಾರೆ.
View this post on Instagram
“ನನ್ನ ಟಿಕೆಟ್ ಮೇಲೆ ಅವರು ಏಕೆ ಮೊಬೈಲ್ ನಂಬರ್ ಬರೆದು, ನನಗೆ ಕರೆ ಮಾಡುವಂತೆ ತಿಳಿಸಿದರು ಎಂಬುದೇ ನನಗೆ ತಿಳಿಯುತ್ತಿಲ್ಲ. ಇದು ಯಾವ ರೀತಿಯ ವರ್ತನೆ? ನಾನಂತೂ ಭಾರೀ ಅಚ್ಚರಿಗೆ ಒಳಗಾಗಿದ್ದೇನೆ. ನೀವೇ ಹೇಳಿ, ನಿಮಗಿದು ಸರಿ ಅನಿಸುತ್ತದೆಯೇ?” ಎಂದು ವಿಡಿಯೋದಲ್ಲಿ ತಮ್ಮ ಅನುಯಾಯಿಗಳಿಗೆ ಪ್ರಶ್ನಿಸಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡ ದಿನಾರ ಎಂಬ ಮಹಿಳೆಗೆ ಇನ್ಸ್ಟಾಗ್ರಾಮ್ನಲ್ಲಿ 80,000ಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).
ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್? ಫ್ಯಾನ್ಸ್ ಕಿಡಿ
ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು