ಲಾರಿ, ಬಸ್‌ ನಡುವೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 14 ಮಂದಿ ದುರ್ಮರಣ- ಕೆಲವರ ಸ್ಥಿತಿ ಚಿಂತಾಜನಕ

ಕರ್ನೂಲ್‌ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹದಿನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್ ಪ್ರಯಾಣಿಸುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರಲ್ಲಿ ಮಗು ಸೇರಿದಂತೆ ಎಂಟು ಮಹಿಳೆಯರು ಸೇರಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ … Continue reading ಲಾರಿ, ಬಸ್‌ ನಡುವೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 14 ಮಂದಿ ದುರ್ಮರಣ- ಕೆಲವರ ಸ್ಥಿತಿ ಚಿಂತಾಜನಕ