ನವದೆಹಲಿ: ಇಂದು ಮುಂಗಾರು ಅಧಿವೇಶನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರು ಸೇರಿದಂತೆ ಎಲ್ಲರಿಗೂ ಕರೊನಾ ಪರೀಕ್ಷೆ ಕಡ್ಡಾಯವಾಗಿದೆ.
ಈ ಹಿನ್ನೆಲೆಯಲ್ಲಿ ಸಂಸದರನ್ನು ಪರೀಕ್ಷೆಗೆ ಒಳಪಡಿಸಿದಾಗ ಅನಂತ್ಕುಮಾರ್ ಹೆಗಡೆ ಸೇರಿದಂತೆ 17 ಮಂದಿಗೆ ಕರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸಂಸದ ಅನಂತ್ಕುಮಾರ್ ಅವರು ಕಳೆದ ಶುಕ್ರವಾರ ಅವರು ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನದ ಮೂಲಕ ತೆರಳಿದ್ದರು. ಅಲ್ಲಿಗೆ ತಲುಪಿದ ಬಳಿಕ ಎನ್ ಐಸಿಪಿಆರ್ ಆಸ್ಪತ್ರೆಯಲ್ಲಿ ತಪಾಸಣೆಗೊಳಪಟ್ಟಿದ್ದರು. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ.
ತಮಗೆ ಯಾವುದೇ ರೀತಿಯಲ್ಲಿಯೂ ಸೋಂಕಿನ ಲಕ್ಷಣಗಳು ಇಲ್ಲ. ಆದರೂ ಪಾಸಿಟಿವ್ ಬಂದಿದೆ ಎಂದು ಅನಂತ್ಕುಮಾರ್ ಹೇಳಿದ್ದಾರೆ. ಸದ್ಯ ಇವರು ದೆಹಲಿಯ ನಿವಾಸದಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಇದನ್ನೂ ಓದಿ: ನಟ ಸೂರ್ಯನ ವಿರುದ್ಧ ನ್ಯಾಯಾಂಗ ನಿಂದನೆಗೆ ಕೋರಿದ ಜಡ್ಜ್! ಅಷ್ಟಕ್ಕೂ ಮಾಡಿರೋ ತಪ್ಪೇನು?
ಇವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಶಿರಸಿಯ ಅವರ ನಿವಾಸಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಕುಟುಂಬದವರ ಗಂಟಲುದ್ರವ ಪರೀಕ್ಷಿಸಿದ್ದು ಅವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಹೇಳಲಾಗಿದೆ.
ಈ ನಡುವೆಯೇ, ಅಧಿವೇಶನದಲ್ಲಿ ಹಾಜರು ಆಗಹೊರಟಿದ್ದ ಸಂಸದರನ್ನು ಪರೀಕ್ಷೆ ಮಾಡಿದಾಗ 16 ಮಂದಿಗೆ ಕರೊನಾ ಪಾಸಿಟಿವ್ ಬಂದಿದೆ.
ಇವರ ಪೈಕಿ ಅತ್ಯಧಿಕ ಕರೊನಾ ಪಾಸಿಟಿವ್ ಬಂದಿರುವುದು ಬಿಜೆಪಿ ಸಂಸದರಿಗೆ. 12 ಮಂದಿ ಬಿಜೆಪಿ ಸಂಸದರು, ಇಬ್ಬರು ವೈಎಸ್ಆರ್ ಕಾಂಗ್ರೆಸ್, ಹಾಗೂ ತಲಾ ಒಬ್ಬರು ಶಿವ ಸೇನಾ, ಡಿಎಂಕೆ ಹಾಗೂ ಆರ್ಎಲ್ಪಿ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದ ಸುಕಂಠ ಮಜುಮ್ದಾರ್ ಅವರು ನಿನ್ನೆನೇ ತಮಗೆ ಪಾಸಿಟಿವ್ ಬಂದಿರುವ ಕುರಿತು ಟ್ವೀಟ್ ಮಾಡಿದ್ದರು. ತಮ್ಮ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೆ ಒಳಗಾಗುವಂತೆ ಹೇಳಿದ್ದರು.
ಪ್ರಧಾನಿಗೆ ದೇಶದ ಬಗ್ಗೆ ಕಾಳಜಿ ಇಲ್ಲ ಎಂದು ಅಮೆರಿಕದಿಂದ ರಾಹುಲ್ ಗಾಂಧಿ ಟ್ವೀಟ್!
‘ನೆಹರೂ ಕಟ್ಟಿಸಿರೋ ‘ಏಮ್ಸ್’ ಇರೋವಾಗ ಸೋನಿಯಾ ಪದೇ ಪದೇ ವಿದೇಶಕ್ಕೆ ಹೋಗೋದ್ಯಾಕೆ?’