More

    ಎಸ್.ಬಾಲರಾಜು ಗೆಲುವು ಸಾಧಿಸುವುದು ಖಚಿತ

    ಯಳಂದೂರು: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಶಾಸಕ ಎಸ್.ಬಾಲರಾಜು ಈ ಬಾರಿ ಗೆಲುವು ಸಾಧಿಸಲಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭಿಯಾನ ಪ್ರಮುಖ್ ಲೊಕೇಶ್ ಸೀಗಡಿ ಆಶಯ ವ್ಯಕ್ತಪಡಿಸಿದರು.


    ಬಾಲರಾಜು ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಬಾಲರಾಜು ಅವರನ್ನು ಅಭಿನಂದಿಸಿ ಮಾತನಾಡಿದರು.
    ಎಸ್.ಬಾಲರಾಜು ಯಳಂದೂರು ತಾಲೂಕಿನ ಮದ್ದೂರು ಗ್ರಾಮದವರಾಗಿದ್ದಾರೆ. ಶಾಸಕರಾಗಿ ಸೇವೆ ಸಲ್ಲಿಸಿ, ಈ ಹಿಂದೆ ಬಿಜೆಪಿಯಲ್ಲೂ ಇದ್ದು ಹಲವು ಹುದ್ದೆಗಳನ್ನು ಅಲಂಕರಿಸಿ ಅಪಾರ ಅನುಭವವನ್ನು ಪಡೆದ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ. ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸದಾ ಜನಪರ ಕಾಳಜಿಯುಳ್ಳ ವ್ಯಕ್ತಿಯಾಗಿದ್ದು, ನಿತ್ಯ ಸಾರ್ವಜನಿಕ ಸೇವಾ ಕೇಂದ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರಿಗೆ ಪಕ್ಷದ ವರಿಷ್ಠರು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಕ್ಷೇತ್ರದಲ್ಲಿರುವ ಪಕ್ಷದ ಎಲ್ಲ ವರಿಷ್ಠರೂ ಅವರೊಡನೆ ಕೈ ಜೋಡಿಸಲಿದ್ದಾರೆ. ಕೇಂದ್ರದ ಜನಪರ ಯೋಜನೆಗಳು, ನರೇಂದ್ರ ಮೋದಿ ಅವರ ಆಡಳಿತ, ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿರುವ ಬಿಜೆಪಿ ಪರ ಒಲವು ಮತ್ತು ಕಾರ್ಯಕರ್ತರ ಹುರುಪು ಇವೆಲ್ಲಾ ಅಂಶಗಳು ಈ ಬಾರಿಯ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


    ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೆಂಪರಾಜು, ಮಹಮ್ಮದ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts