ಲಂಡನ್​ನಲ್ಲಿ ಅದ್ಧೂರಿಯಾಗಿ ನಡೆದ ಬಸವೇಶ್ವರ ಜಯಂತಿ- ಅಂಬೇಡ್ಕರ್​ ಪ್ರತಿಮೆಗೆ ಪುಷ್ಪ ನಮನ

ಲಂಡನ್​: ಬಸವೇಶ್ವರರ 889ನೇ ಜನ್ಮದಿನವನ್ನು ಲಂಡನ್​ನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಭಾರತೀಯ ಹೈಕಮಿಷನರ್ ಗಾಯಿತ್ರಿ ಇಸ್ಸಾರ್ ಕುಮಾರ್ ಅವರು ಬಸವೇಶ್ವರ ಪ್ರತಿಮೆ ಜತೆಗೆ ಡಾ.ಬಿ.ಆರ್​.ಅಂಬೇಡ್ಕರ್​ ಅವರ ಪ್ರತಿಮೆಗೂ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 2015ರ ನವೆಂಬರ್​ 14ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಸವೇಶ್ವರ ಮತ್ತು ಡಾ.ಬಿ.ಆರ್​.ಅಂಬೇಡ್ಕರ್​ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ದಿನದಿಂದ ಲ್ಯಾಂಬೆತ್​ ಬಸವೇಶ್ವರ ಫೌಂಡೇಷನ್​ ವತಿಯಿಂದ ಈ ಇಬ್ಬರು ಮಹಾನುಭಾವರ ಜಯಂತಿಯನ್ನು ಏಕಕಾಲದಲ್ಲಿ … Continue reading ಲಂಡನ್​ನಲ್ಲಿ ಅದ್ಧೂರಿಯಾಗಿ ನಡೆದ ಬಸವೇಶ್ವರ ಜಯಂತಿ- ಅಂಬೇಡ್ಕರ್​ ಪ್ರತಿಮೆಗೆ ಪುಷ್ಪ ನಮನ