ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಹುಜನ್ ಸಮಾಜ್ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಇಬ್ಬರೂ ಭಾರತ ರತ್ನ ಪ್ರಶಸ್ತಿಗೆ ಅರ್ಹರು ಎಂದಿರುವ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಇವರಿಗೆ ಈ ಗೌರವ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಸೋನಿಯಾ ಗಾಂಧಿ ಮತ್ತು ಮಾಯಾವತಿ ಅವರು ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಭಾರತ ರತ್ನಕ್ಕೆ ಅರ್ಹರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾವತ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
आदरणीय #सोनिया_गांधी जी व सम्मानित बहन #मायावती जी, दोनों प्रखर राजनैतिक व्यक्तित्व हैं। आप उनकी राजनीति से सहमत और असहमत हो सकते हैं, मगर इस तथ्य से आप इनकार नहीं कर सकते हैं कि सोनिया जी ने भारतीय महिला की गरिमा और सामाजिक समर्पण व जनसेवा के मापदंडों को एक नई ऊंचाई व pic.twitter.com/FaFfHOf355
— Harish Rawat (@harishrawatcmuk) January 5, 2021
ಈ ಇಬ್ಬರೂ ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಸೇವೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿರುವ ರಾವತ್, ‘ನೀವು ಅವರ ರಾಜಕೀಯವನ್ನು ಒಪ್ಪಬಹುದು ಅಥವಾ ಒಪ್ಪದಿರಬಹುದು ಆದರೆ ಸೋನಿಯಾಜಿಯವರ ಘನತೆ, ಸಾಮಾಜಿಕ ಕಳಕಳಿ ಬಹುಮುಖ್ಯವಾದದ್ದು. ಭಾರತೀಯ ಮಹಿಳೆಯರ ಸ್ಥಾನವನ್ನು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಎತ್ತರಕ್ಕೆ ಕೊಂಡೊಯ್ದಿದ್ದಾರೆ ಈ ಇಬ್ಬರು. ಅದನ್ನು ನೀವು ತಳ್ಳಿಹಾಕುವಂತಿಲ್ಲ” ಎಂದಿದ್ದಾರೆ.
ಮಾಯಾವತಿಯವರು ಹಲವಾರು ವರ್ಷಗಳಿಂದ ಶೋಷಿತ ಮತ್ತು ಕೆಳವರ್ಗದ ಜನರ ಪರವಾಗಿದ್ದು ಅವರಲ್ಲಿ ವಿಶ್ವಾಸ ಮೂಡಿಸಿದ್ದಾರೆ ಎಂದಿರುವ ಮಾಜಿ ಮುಖ್ಯಮಂತ್ರಿ, ಇಬ್ಬರಿಗೂ ಭಾರತ ರತ್ನ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಮುಂಬೈ ಯುವಕ ಕುತ್ತಿಗೆ ಸೀಳಿಕೊಂಡ… ಐರ್ಲೆಂಡ್ನಲ್ಲಿ ಕೂತವ ಬಚಾವ್ ಮಾಡಿದ… ಅಬ್ಬಬ್ಬಾ ಎಂಥ ವಿಚಿತ್ರವಿದು!