ಬೆಂಗಳೂರು : ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಕಚೇರಿ, ಸಂಘ-ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಕರೊನಾ ಒಬ್ಬರಿಂದ ಒಬ್ಬರಿಗೆ ಹರಡುವ ಭೀತಿ ಇರುವ ಕಾರಣದಿಂದ ವಿನಾಯಿತಿ ನೀಡಲಾಗಿದೆ.
ಆದರೆ ಇದೀಗ ಕೆಲವು ಕಡೆಗಳಲ್ಲಿ ಈ ವಿನಾಯಿತಿಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ಪುನಃ ಜಾರಿಗೆ ಬಂದಿದೆ. ಇದೀಗ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಆಡಳಿತ ಸುಧಾರಣೆ-ತಪಾಸಣೆ) ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಸಿ.ಹರ್ಷರಾಣಿ ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯಲ್ಲಿ ಹೀಗಿದೆ:
ರಾಜ್ಯದ ಕೆಲವೊಂದು ಕಡೆ ಕರೊನಾ ವೈರಾಣು ಕಂಡು ಬಂದ ಹಿನ್ನಲೆಯಲ್ಲಿ ಕಳೆದ ಏಪ್ರಿಲ್ 27ರಂದು ಹೊರಡಿಸಿದ್ದ ಆದೇಶದಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವಲ್ಲಿ ವಿನಾಯಿತಿ ನೀಡಲಾಗಿತ್ತು.
ಪ್ರಸ್ತುತ ಕೋವಿಡ್-19 ಪ್ರಕರಣಗಳು ಮತ್ತು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬೆಂಗಳೂರು ಮತ್ತು ಬೆಂಗಳೂರಿನ ಹೊರಗೆ ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನರಾಂಭಿಸಲಾಗಿದೆ.
ಬಯೋಮೆಟ್ರಿಕ್ ಎಲ್ಲಾ ಯಂತ್ರಗಳ ಪಕ್ಕದಲ್ಲಿ ಸೂಕ್ತ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಇಂದಿನಿಂದ ಮತ್ತೆ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲಾಗಿದೆ.
ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ
ಸೋನಿಯಾ- ಮನ್ಮೋಹನ್ ಸಿಂಗ್ ಸಿಕ್ರೇಟ್ ಬಿಚ್ಚಿಟ್ಟ ಒಬಾಮಾ: ಭಾರತದಲ್ಲಿ ಸಂಚಲನ!
ತಡವಾಗಿ ಬಂದದ್ದೂ ಅಲ್ಲದೇ ವಿಮಾನಯಾನ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ ಸಬ್ ಇನ್ಸ್ಪೆಕ್ಟರ್!