ತುಂಗಭದ್ರಾ ನದಿಯ ಸೇತುವೆ ದಿಢೀರ್​ ಕುಸಿತ: ನಸುಕಿನಲ್ಲಿ ತಪ್ಪಿದ ಭಾರಿ ಅನಾಹುತ- ಲಾರು, ಕಾರು ಜಖಂ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಮದಗಲಟ್ಟಿ ಸಮೀಪದ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ಇಂದು ನಸುಕಿನಲ್ಲಿಯೇ ಕುಸಿದು ಬಿದ್ದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಇದೇ ವೇಳೆ ಸೇತುವೆ ಮೇಲೆ ಪ್ರಯಾಣಿಸುತ್ತಿದ್ದ ಲಾರಿ ಮತ್ತು ಕಾರು ಜಖಂಗೊಂಡಿವೆ. ಕೆಲ ದಿನಗಳಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ನದಿಯ ನೀರಿನ ಮಟ್ಟವೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿಯೇ ಸೇತುವೆ ಕುಸಿದಿದೆ. ಘಟನೆಯಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯವಾಗಿದೆ. … Continue reading ತುಂಗಭದ್ರಾ ನದಿಯ ಸೇತುವೆ ದಿಢೀರ್​ ಕುಸಿತ: ನಸುಕಿನಲ್ಲಿ ತಪ್ಪಿದ ಭಾರಿ ಅನಾಹುತ- ಲಾರು, ಕಾರು ಜಖಂ