ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ಒತ್ತಡದ ನಡುವೆಯೂ ಶುಕ್ರವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ನ ರೋಚಕ ಪಂದ್ಯವನ್ನು ಕಾರಿನಲ್ಲೇ ವೀಕ್ಷಿಸಿದರು. ಪಂದ್ಯ ವೀಕ್ಷಣೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರು ಕುತೂಹಲದಿಂದ ಐಪಿಎಲ್ ಪಂದ್ಯ ವೀಕ್ಷಿಸಿದ್ದನ್ನು ಅಭಿಮಾನಿಗಳು ವೀಡಿಯೋ ಮಾಡಿಕೊಂಡಿದ್ದಾರೆ. ಕೆಲವರು ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಿಗೆ ಹರಿಬಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುವ ವೇಳೆ ಕಾರಿನಲ್ಲಿ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿದರು. ಶುಕ್ರವಾರ ಐಪಿಎಲ್ ಲೀಗ್ನ ಕೊನೇ ಪಂದ್ಯವನ್ನು ಯಡಿಯೂರಪ್ಪ ಅವರು ಕಾರಿನಲ್ಲೇ ವೀಕ್ಷಿಸಿದ್ದು ಅವರಿಗೆ ಐಪಿಎಲ್ ಕ್ರೇಜ್ ಎಷ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿತ್ತು.
ಡೆಲ್ಲಿ ನೀಡಿದ್ದ 165 ರನ್ಗಳ ಗುರಿ ಬೆನ್ನಟ್ಟಿದ್ದ ಆರ್ಸಿಬಿಗೆ ಕೊನೇ ಎಸೆತದಲ್ಲಿ 5 ರನ್ ಬೇಕಿತ್ತು. ಈ ವೇಳೆ ಶ್ರೀಕರ್ ಭರತ್ ಕೊನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿ ಆರ್ಸಿಬಿ ಅಭಿಮಾನಿಗಳನ್ನು ಸಂಭ್ರಮದಲ್ಲಿ ತೇಲಾಡುವಂತೆ ಮಾಡಿದ್ದರು. ಕಾರ್ಯಕ್ರಮದ ಬಳಿಕ ಪಂದ್ಯದ ಅಂತಿಮ ಕ್ಷಣಗಳನ್ನು ಮಾಜಿ ಸಿಎಂ ವೀಕ್ಷಿಸಿ ಸಂಭ್ರಮಿಸಿದರು.