ನಾಳೆಯಿಂದ ನೌಕರರಿಗಾಗಿ ಬಸ್‌ ಇರುತ್ತಾ? ಕೆಲಸಕ್ಕೆ ಹೋಗಲು ಪಾಸ್‌ ಬೇಕಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ ನೋಡಿ…

ಬೆಂಗಳೂರು: ಕಾರ್ಮಿಕರು ಕೆಲಸಕ್ಕೆ ತೆರಳಲು ಪಾಸ್ ಬೇಕಾಗಿಲ್ಲ. ವಿವಿಧ ಇಲಾಖೆಗಳ ನೌಕರರು, ನಿರ್ಮಾಣ ಕಾಮಗಾರಿಗಳ ಕಾರ್ಮಿಕರು ಸೇರಿದಂತೆ ಅಗತ್ಯ ಸೇವೆಗೆ ತೆರಳುವವರಿಗೆ ನಿಯಮಿತವಾಗಿ ಬಸ್‌ಗಳ ವ್ಯವಸ್ಥೆಯಿರುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದರು. ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿಯಿಂದ ಜಾರಿಗೆ ಬರಲಿರುವ ಬಿಗಿಕ್ರಮಗಳ (ಸೆಮ್‌ ಲಾಕ್‌ಡೌನ್) ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಡಿಜಿಪಿ, ಎಡಿಜಿಪಿ ಒಳಗೊಂಡು ಉನ್ನತಾಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ. … Continue reading ನಾಳೆಯಿಂದ ನೌಕರರಿಗಾಗಿ ಬಸ್‌ ಇರುತ್ತಾ? ಕೆಲಸಕ್ಕೆ ಹೋಗಲು ಪಾಸ್‌ ಬೇಕಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ ನೋಡಿ…