ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್ ಸಹೋದರ ರಂಜಿತ್ ನೀಡಿರುವ ಸ್ಫೋಟಕ ಮಾಹಿತಿ.
ಕಳೆದ ಹಲವು ದಿನಗಳಿಂದ ಪ್ರವೀಣ್ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ‘ದಿಗ್ವಿಜಯ ನ್ಯೂಸ್’ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ.
ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. ಚಿಕನ್, ಮಟನ್, ಮೀನು ಮಾರಾಟ ಮಾಡುವ ದಂಧೆ ಮುಸ್ಲಿಮರ ಹಿಡಿತದಲ್ಲಿದೆ. ಹಲವು ದಿನಗಳ ಹಿಂದೆ ಹಿಂದೂಗಳೂ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದರಿಂದಲೇ ಈ ಗಲಾಟೆ ಶುರುವಾಗಿರುವ ಸಂದೇಹವಿದೆ.
ಈ ಕುರಿತು ಮಾಹಿತಿ ನೀಡಿರುವ ರಂಜಿತ್, ಒಂಬತ್ತು ತಿಂಗಳ ಹಿಂದೆಯಷ್ಟೇ ಪ್ರವೀಣ್ ಚಿಕನ್ ಅಂಗಡಿ ತೆರೆದಿದ್ದರು. ಇದೇ ಕೊಲೆಗೆ ಕಾರಣ ಇರಬಹುದು. ಇದರ ಹಿಂದೆ ಬಹು ದೊಡ್ಡ ಜಾಲವೇ ಇದೆ. ಝಾಕೀರ್ ಮತ್ತು ಷಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ಇರುವುದು ದೊಡ್ಡ ಜಾಲವಿದೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್)
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಇದೆಯೆ ಹಲಾಲ್ ನಂಟು? ಕೃತ್ಯಕ್ಕೂ ಮುನ್ನ ಆಗಿದ್ದೇನು?
VIDEO: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಷಫೀಕ್ ಪತ್ನಿ ಹೇಳಿದ್ದೇನು ಕೇಳಿ…
ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ.ಅಶ್ವತ್ಥನಾರಾಯಣ ಘೋಷಣೆ