More

    ಜ್ವರದಿಂದ ಬಳಲ್ತಿರೋ ಬಾಲಕನಿಗೆ ದೆವ್ವ ಹಿಡಿದಿದೆ ಎಂದ ಸ್ವಾಮಿ: ಮಗನನ್ನು ಕೊಲೆ ಮಾಡಿದ ತಾಯಿ!

    ಚೆನ್ನೈ: ಮಗುವಿಗೆ ದೆವ್ವ ಹಿಡಿದಿರುವುದಾಗಿ ಸ್ವಾಮೀಜಿಯೊಬ್ಬ ಹೇಳಿದ ಕಾರಣಕ್ಕೆ ಜ್ವರದಿಂದ ಬಳಲುತ್ತಿರುವ ಏಳು ವರ್ಷದ ಮಗುವನ್ನು ತಾಯಿಯೇ ಕೊಲೆ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಾನಿಯಲ್ಲಿ ನಡೆದಿದೆ.

    ಬಾಲಕನಿಗೆ ಕೆಲವು ದಿನಗಳಿಂದ ಆರೋಗ್ಯ ಕೆಟ್ಟಿತ್ತು. ಮಾನಸಿಕವಾಗಿಯೂ ಆತನಿಗೆ ಏನೋ ಸಮಸ್ಯೆಯಾಗಿತ್ತು.. ಆಸ್ಪತ್ರೆಗೆ ಹೋಗುವ ಬದಲು ಈ ತಾಯಿ ಸ್ವಾಮೀಜಿಯನ್ನು ಭೇಟಿಯಾಗಿದ್ದಾಳೆ. ಆತನಿಗೆ ದೆವ್ವ ಹಿಡಿದಿದೆ ಎಂದು ಆತ ಹೇಳಿದ್ದಾನೆ.

    ಮನೆಗೆ ಬಂದವಳೇ ಮಗನನ್ನು ಹಿಗ್ಗಾಮುಗ್ಗ ಥಳಿಸಿದ ತಾಯಿ, ಮೂರು ದಿನಗಳಿಂದ ಆತನಿಗೆ ಆಹಾರ ನೀಡದೇ ಪೀಡಿಸಿದ್ದಾಳೆ. ಸಾಲದು ಎಂಬುದಕ್ಕೆ ಇದಕ್ಕೆ ನೆರೆಹೊರೆಯ ಇನ್ನಿಬ್ಬರು ಮಹಿಳೆಯರು ಸಹಕರಿಸಿದ್ದಾರೆ! ಹೀಗೆ ಮಾಡಿದರೆ ಮಗನ ಮೈಮೇಲೆ ಇರುವ ಭೂತ ಹೊರಟುಹೋಗುತ್ತದೆ ಎಂದು ನಂಬಿದ್ದಾಳೆ. ಇದರಿಂದ ಮಗು ನರಳಿ ನರಳಿ ಸತ್ತು ಹೋಗಿದೆ.

    ಘಟನೆಯ ಬಗ್ಗೆ ತಿಳಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತಲುಪುವ ಮೊದಲೇ ಬಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಾಯಿ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಬೆಡ್‌ರೂಮ್‌ಗೆ ಬಂದ ಏಲಿಯನ್‌: ಪುರುಷನಿಗಿಂತಲೂ ಇವೇ ಬೆಸ್ಟ್‌- ವಿಚಿತ್ರ ಅನುಭವ ಬಿಚ್ಚಿಟ್ಟ ನಟಿ!

    ಅಪಘಾತದಲ್ಲಿ ಸತ್ತವನ ಡಿಎನ್‌ಎ ಆಯ್ತು ಮ್ಯಾಚ್‌- 10 ವರ್ಷಗಳ ಬಳಿಕ ಪ್ರತ್ಯಕ್ಷನಾದವ ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts