More

    ಚಿತ್ರದುರ್ಗದ ನಾಲ್ವರ ಸಾವಿಗೆ ಭಯಾನಕ ಟ್ವಿಸ್ಟ್‌: ಅಪ್ಪ, ಅಮ್ಮ, ಅಜ್ಜಿ, ತಂಗಿಯನ್ನು ಕೊಂದ ಬಾಲಕಿ!

    ಚಿತ್ರದುರ್ಗ: ಕಳೆದ ಜುಲೈ 13ರಂದು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿ ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ಮೃತಪಟ್ಟಿದ್ದರು. ಎಲ್ಲರೂ ವಿಷಾಹಾರ ಸೇವನೆಯಿಂದ ಸತ್ತಿರುವುದು ತಿಳಿದುಬಂದಿತ್ತು. ಆದ್ದರಿಂದ ಇದು ಆತ್ಮಹತ್ಯೆ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ನಂತರ ಯಾರೋ ವಿಷ ಹಾಕಿರುವುದು ‍ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು.

    ಆದರೆ ಇದೀಗ ಈ ನಿಗೂಢ ಸಾವಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಮನೆ ಮಗಳೇ ಅಪ್ಪ-ಅಮ್ಮ, ಅಜ್ಜಿ ಮತ್ತು ಸಹೋದರಿಯರಿಗೆ ಊಟದಲ್ಲಿ ವಿಷ ಕೊಟ್ಟು ಕೊಲೆ ಮಾಡಿರುವ ಭಯಾನಕ ಸತ್ಯ ಹೊರಕ್ಕೆ ಬಂದಿದೆ!

    ಮನೆಯಲ್ಲಿ ಬಡತನವಿದ್ದುದರಿಂದ ತನ್ನನ್ನು ಕೂಲಿ ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವುದು, ವಿನಾ ಕಾರಣ ಬಯ್ಯುತ್ತಿದ್ದರು. ಇದೇ ಕಾರಣಕ್ಕೆ ವಿಷ ಬೆರೆಸಿದ್ದಾಗಿ ಹಿರಿಯ ಮಗಳು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣದಲ್ಲಿ ಒಂದೇ ಕುಟುಂಬದ ತಿಪ್ಪಾ ನಾಯ್ಕ (45), ಸುಧಾಬಾಯಿ (40), ರಮ್ಯಾ (16) ಹಾಗೂ ಗುಂಡಿಬಾಯಿ (80) ಮೃತಪಟ್ಟಿದ್ದರು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಗ ರಾಹುಲ್‌ ಚೇತರಿಸಿಕೊಂಡಿದ್ದಾರೆ.

    ಆಗಿದ್ದೇನು? ಅಂದು ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ತಾಯಿ ಅಡುಗೆ ಮಾಡಲು ತಾಯಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಳು. ಅದೇ ಸಮಯಕ್ಕೆ ಕರೆಂಟ್‌ ಹೋಯಿತು. ಈ ಸಮಯದಲ್ಲಿ ಮುದ್ದೆ ಪಾತ್ರೆಗೆ ಯಾರೋ ವಿಷ ಬೆರೆಸಿರುವುದು ತಿಳಿದಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ರಾಹುಲ್‌ ಪೊಲೀಸರಿಗೆ ದೂರು ನೀಡಿದ್ದ.

    ಈ ಕುರಿತು ತನಿಖೆ ನಡೆಸಿದ್ದ ಪೊಲೀಸರು ಅಡುಗೆ ಮಾಡಲು ಬಳಸಿದ್ದ ಪಾತ್ರೆ, ಆಹಾರ ಪದಾರ್ಥಗಳನ್ನು ವಿಧಿ ವಿಜ್ಞಾನ ಸಂಸ್ಥೆಗೆ ರವಾನಿಸಿದ್ದರು. ಎಲ್ಲರೂ ಅಂದು ಮುದ್ದೆ ಊಟ ಮಾಡಿದ್ದರೆ, 17 ವರ್ಷದ ಹಿರಿಯ ಮಗಳು ಮಾತ್ರ ಊಟ ಮಾಡಿರಲಿಲ್ಲ. ತನಗೆ ಊಟ ಬೇಡ ಎಂದಿದ್ದಳು. ಈ ಮಾಹಿತಿ ಪೊಲೀಸರಿಗೆ ಸಿಕ್ಕ ಕೂಡಲೇ ಆಕೆಯನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ತಾನೇ ವಿಷ ಇಕ್ಕಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪದೇ ಪದೇ ಕೂಲಿಗೆ ಹೋಗು ಎಂದು ಬೈಯುತ್ತಿದ್ದುದರಿಂದ ಈ ಕೃತ್ಯ ಮಾಡಿರುವುದಾಗಿ ಆಕೆ ಹೇಳಿದ್ದಾರೆ. ಈ ಕುರಿತು ಚಿತ್ರದುರ್ಗ ಎಸ್ಪಿ ರಾಧಿಕಾ ಮಾಹಿತಿ ನೀಡಿದ್ದಾರೆ.

    ಕೆಆರ್‌ಎಸ್‌ನಲ್ಲಿ ಸೆಲ್ಫೀ ತೆಗೆಯಲು ಹೋಗಿ ನದಿಗೆ ಬಿದ್ದ ಪತ್ನಿ- ಆಕೆಯ ರಕ್ಷಿಸಲು ಹಾರಿದ ಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts