ಬೆಂಗಳೂರು: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರಕ್ಕೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪುನೀತ್ ಅವರನ್ನು ಕೊಂಡಾಡಿದರು.
ಅಪ್ಪು ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.
ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ. ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.
ಫಿಲ್ಮ್ ಸಿಟಿಗೆ ಪುನೀತ್ ರಾಜ್ಕುಮಾರ್ ಹೆಸರಿಟ್ಟರೆ ಸಂತೋಷ: ನಟ ಶಿವರಾಜ್ಕುಮಾರ್
ಇಂದು ಈ ಸಲೂನ್ಗೆ ಯಾರೇ ಬಂದ್ರೂ ಹೇರ್ ಕಟಿಂಗ್, ಶೇವಿಂಗ್ ಉಚಿತ! ಅಭಿಮಾನ ಮೆರೆದ ಅಪ್ಪು ಫ್ಯಾನ್ಸ್