More

    ಎಸ್. ಜಯಣ್ಣನಿಗೆ ಕಾಂಗ್ರೆಸ್ ಮುಖಂಡರಿಂದ ಸನ್ಮಾನ


    ಚಾಮರಾಜನಗರ: ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಎಸ್.ಜಯಣ್ಣ ಅವರನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೊಳ್ಳೇಗಾಲ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಶನಿವಾರ ಸನ್ಮಾನಿಸಿ ಅಭಿನಂದಿಸಿದರು.


    ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿ ಕೊಳ್ಳೇಗಾಲಕ್ಕೆ ಆಗಮಿಸಿದ ಎಸ್.ಜಯಣ್ಣ ಅವರು ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಶಾಸಕ ಎ.ಆರ್.ಕೃಷ್ಣಮೂರ್ತಿ, ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಅಭಿನಂದಿಸಿದರು.

    ಈ ವೇಳೆ ಮಾತನಾಡಿದ ಎಸ್. ಜಯಣ್ಣ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನ ಸೇವೆ ಮಾಡಲು ನನಗೊಂದು ಅವಕಾಶ ನೀಡಿದ್ದಾರೆ. ಈ ಅಧಿಕಾರ ದೊರೆಯಲು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನನಗೆ ಬೆಂಬಲ ನೀಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಅಧಿಕಾರವನ್ನು ಸದ್ಬಳಕ್ಕೆ ಮಾಡಿಕೊಂಡು ಜನರ ಕೆಲಸಗಳನ್ನು ಮಾಡಿಕೊಡುತ್ತೇನೆಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಸಿಪಿಐ ಶಿವಮಾದಯ್ಯ ನಗರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts