More

    ಬೆಂಗಳೂರಿನಲ್ಲೂ ಗುಟ್ಟಾಗಿ ನಡೀತಿದ್ಯಾ ಮತಾಂತರ? ಪೊಲೀಸರಿಗೆ ಸಿಕ್ಕರು ನೂರಾರು ಮಕ್ಕಳು!

    ಬೆಂಗಳೂರು: ಇತ್ತೀಚೆಗಷ್ಟೇ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಭಾರಿ ಚರ್ಚೆ ಶುರುವಾಗಿತ್ತು. ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಕೂಡ ತಮ್ಮ ತಾಯಿಯನ್ನು ಮತಾಂತರ ಮಾಡಿರುವ ಬಗ್ಗೆ ಕಣ್ಣೀರು ಹಾಕಿದ್ದರು. ಹೇಗೆ ತಮ್ಮ ತಾಯಿ ಕ್ರೈಸ್ತ ಧರ್ಮಕ್ಕೆ ಪರಿವರ್ತನೆಗೊಂಡಿದ್ದು, ಅವರ ಮನಸ್ಸನ್ನು ಹೇಗೆ ಬದಲಾಯಿಸಲಾಗಿದೆ ಎಂದು ಹೇಳಿಕೊಂಡಿದ್ದರು.

    ಈಗ ಅದರ ಬೆನ್ನಲ್ಲೇ ಬೆಂಗಳೂರಿನ ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಆರ್​ಎಸ್​ಎಸ್​ ಕಾರ್ಯಕರ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದರು.

    ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ 80ಕ್ಕೂ ಅಧಿಕ ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗುತ್ತಿದೆ ಎಂದು ಸ್ಥಳೀಯರು ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೇ ಮಕ್ಕಳಿಂದ ಪ್ರಾರ್ಥನೆ ಮಾಡಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ವೈರಲ್‌ ಆಗಿದೆ.

    ಈ ದೂರಿನ ಆಧಾರದ ಮೇಲೆ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಆ ಮನೆಯಲ್ಲಿ ಮಕ್ಕಳು ಇರುವುದು ಖಚಿತವಾಗಿದ್ದರೂ ಅದೇನು ಮತಾಂತರವಲ್ಲ ಎಂದು ನಾರಾಯಣಸ್ವಾಮಿ ಕುಟುಂಬಸ್ಥರು ಹೇಳಿದ್ದಾರೆ.

    ಈ ಎಲ್ಲಾ ಮಕ್ಕಳಿಗೆ ಪ್ರಾರ್ಥನೆ ಮಾತ್ರ ಮಾಡಿಸಲಾಗುತ್ತಿದೆ. ಮತಾಂತರವೇನೂ ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಈ ಮಕ್ಕಳಿಗೆ ಪ್ರಾರ್ಥನೆ ಮಾಡಿಸುವ ಉದ್ದೇಶ ಏನಿತ್ತು ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆಯಷ್ಟೇ. ಆದರೆ ಕೋವಿಡ್‌ ನಿಯಮ ಉಲ್ಲಂಘಿಸಿ ನಾರಾಯಣಸ್ವಾಮಿ ವಿರುದ್ಧ ಕೇಸು ದಾಖಲಿಸಲಾಗಿದೆ.

    ಗುಲಾಬ್‌ ಚಂಡಮಾರುತ: ಮೀನುಗಾರರು ನಾಪತ್ತೆ- ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

    ದಾಖಲೆ ಪುಟ ಸೇರಿತು ನಾಯಿಯ ಕಿವಿ: ಇದರ ಅಳತೆ ಕೇಳಿದರೆ ಶಾಕ್‌ ಆಗೋದು ಗ್ಯಾರೆಂಟಿ

    ಗುಲಾಬ್‌ ಚಂಡಮಾರುತ: ಮೀನುಗಾರರು ನಾಪತ್ತೆ- ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts