More

    ಬಿಜೆಪಿ ಮುಖಂಡನ ಬರ್ಬರ ಹತ್ಯೆ: ಕಾರಿನೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    ಹೈದರಾಬಾದ್: ಇಲ್ಲಿಯ ಮೇದಕ್‌ನ ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನೊಳಕ್ಕೆ ಕೂಡಿ ಹಾಕಿ ಬೆಂಕಿ ಹಚ್ಚಿ ಅವರನ್ನು ಸಾಯಿಸಲಾಗಿದೆ!

    ಕಾರು ಅಡ್ಡ ಹಾಕಿದ ದುಷ್ಕರ್ಮಿಗಳು ಶ್ರೀಮಿವಾಸ್‌ ಮೇಲೆ ಹಲ್ಲೆ ನಡೆಸಿದ್ದು, ಬಲ ಪ್ರಯೋಗಿಸಿ ಕಾರಿನ ಡಿಕ್ಕಿಯೊಳಗೆ ಹಾಕಿ ಲಾಕ್‌ ಮಾಡಿ ನಂತರ ಬೆಂಕಿ ಹಚ್ಚಿದ್ದಾರೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್ ಮೇಲೆ ಶ್ರೀನಿವಾಸ್ ಮೃತದೇಹ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರು ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಲ್ಲಿ ಮೃತದೇಹ ಕೂಡ ಇದ್ದ ಹಿನ್ನೆಲೆಯಲ್ಲಿ ಇದು ಹತ್ಯೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆದರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಮೇದಕ್ ಜಿಲ್ಲೆಯ ಎಸ್‍ಪಿ ಚಂದನಾ ದೀಪ್ತಿ ಹೇಳಿದ್ದಾರೆ. ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಮೇದಕ್‌ ಜಿಲ್ಲೆಯ ಪೊಲೀಸರು ಬೆಂಕಿ ನಂದಿಸಿದ್ದಾರೆ.

    ಶ್ರೀನಿವಾಸ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರಾಜಕೀಯ ಅಥವಾ ಉದ್ಯಮ ಸಂಬಂಧವಾಗಿ ಕೊಲೆ ಮಾಡಲಾಗಿದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಲಿದ್ದೇವೆ. ಘಟನೆ ಸಂಬಂಧ 302 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

    ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಅಮಾನತಿಗೆ ಕೋರಿ ಕೇಸ್‌ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts