ಚಿಂತೆಗೀಡಾಗಿದ್ದ ಆರೋಪಿ ಡಿಕೆಶಿ ಸಂಬಂಧಿಕರಿಗೆ ಹೈಕೋರ್ಟ್‌ನಿಂದ ಸಿಕ್ತು ತಾತ್ಕಾಲಿಕ ರಿಲೀಫ್‌!

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಂಬಂಧಿಕರು ಸ್ವಲ್ಪ ನಿರಾಳರಾಗುವಂಥ ಆದೇಶವೊಂದನ್ನು ದೆಹಲಿ ಹೈಕೋರ್ಟ್‌ ನೀಡಿದೆ. ಅದೇನೆಂದರೆ, ಕರೊನಾ ವೈರಸ್‌ ಇರುವ ಹಿನ್ನೆಲೆಯಲ್ಲಿ, ಇವರೆಲ್ಲರ ಹೇಳಿಕೆಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದುಕೊಳ್ಳುವಂತೆ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಆದೇಶಿಸಿದೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ಸಂಬಂಧಿಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಸಾಕ್ಷಿಗಳಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಲಾಲುಗೆ ಸಿಕ್ತು … Continue reading ಚಿಂತೆಗೀಡಾಗಿದ್ದ ಆರೋಪಿ ಡಿಕೆಶಿ ಸಂಬಂಧಿಕರಿಗೆ ಹೈಕೋರ್ಟ್‌ನಿಂದ ಸಿಕ್ತು ತಾತ್ಕಾಲಿಕ ರಿಲೀಫ್‌!