ವಿಜಯನಗರ: ಹಗರಿಬೊಮ್ಮನ ಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಮತದಾನದ ವೇಳೆ ಕೈ, ಕೈ ಮಿಲಾಯಿಸೋ ಹಂತಕ್ಕೆ ಕಾದಾಟ ನಡೆಸಿದ್ದ ಹಾಲಿ ಮತ್ತು ಮಾಜಿ ಶಾಸಕರ ವಿರುದ್ಧ ಕೇಸ್ ದಾಖಲಾಗಿದೆ.
ಸೋಮವಾರ (ಡಿ.28) ಹಗರಿಬೊಮ್ಮನ ಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆ ಮುಗಿದಿದೆ. ಈ ಸಂದರ್ಭದಲ್ಲಿ ಹಾಲಿ ಶಾಸಕ ಭೀಮಾನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ಹಾಗೂ ಅವರ ಬೆಂಬಲಿಗರಿಂದ ಭಾರಿ ಗಲಾಟೆ ನಡೆದಿತ್ತು. ಈ ಗಲಾಟೆ ಕೈ, ಕೈ ಮಿಲಾಯಿಸೋ ಹಂತಕ್ಕೆ ತಲುಪಿತ್ತು.
ಈ ಹಿನ್ನೆಲೆಯಲ್ಲಿ ಇವರಿಬ್ಬರು ಹಾಗೂ ಇವರ ಬೆಂಬಲಿಗರ ವಿರುದ್ಧ ದೂರು ದಾಖಲು ಮಾಡಲಾಗಿದೆ.
ನಿನ್ನೆ ಪುರಸಭೆ ವ್ಯಾಪ್ತಿಯ ಕೆಲ ವಾರ್ಡ್ಗಳಲ್ಲಿ ಈ ಗಲಾಟೆ ನಡೆದಿತ್ತು. ಈ ಹಾಲಿ- ಮಾಜಿಗಳ ಬೆಂಬಲಿಗರಷ್ಟೇ ಅಲ್ಲದೇ ಸ್ವತಃ ಇವರಿಬ್ಬರೂ ಮತಗಟ್ಟೆಗೆ ನುಗ್ಗಿದ್ದರು. ಪರಸ್ಪರ ನಿಂದನೆ ಮಾಡಿಕೊಳ್ಳುವ ಮೂಲ ಬೆಂಬಲಿಗರ ಜತೆಗೆ ನೇರ ಕಾದಾಟಕ್ಕೆ ಇಳಿದಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಇಬ್ಬರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಗಲಾಟೆ ಪ್ರಕರಣ ದಾಖಲಿಸಿದ್ದಾರೆ.
ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ವಿಜಯನಗರ ಎಸ್ಪಿ ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ (ದಿಗ್ವಿಜಯ ನ್ಯೂಸ್)
ಕ್ರಿಸ್ಮಸ್ ಸಡಗರದಲ್ಲಿದ್ದ ಅರಮನೆಯಲ್ಲಿ ಭಾರಿ ಕೋಲಾಹಲ: ರಾಣಿ ಎಲಿಜಬೆತ್ ಕೊಲೆ ಮಾಡಲು ಬಂದ ಯುವಕ!