More

    ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ: ಜೀವ ಕೈಯಲ್ಲಿ ಹಿಡಿದುಕೊಂಡ ಪ್ರಯಾಣಿಕರು!

    ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.

    ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ರಾತ್ರಿ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ರೈಲು ರಾತ್ರಿ 10.30 ರಲ್ಲಿ ಮೈಸೂರಿನಿಂದ ಹೊರಟಿತ್ತು. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಆದರೆ ಇನ್ನೂ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಸಂಚಾರ ಆರಂಭಿಸಿದೆ. ಒಂದು ಗಂಟೆಗೂ‌ ಹೆಚ್ಚು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

    ಮಗುವಿನ ಜತೆ ಬಾವಿಗೆ ಹಾರಿದರೂ ಬದುಕಿದ ಅಮ್ಮ- ಕಂದನ ಶವ ಕಂಡು ಪುನಃ ಆತ್ಮಹತ್ಯೆಗೆ ಯತ್ನ

    ಪರೋಟ ತಿಂದ ಮರುದಿನವೇ ಬಾಲಕ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts