ಬೆಂಗಳೂರು: ಲಾಕ್ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ಅನನುಕೂಲ ಆಗಬಾರದು ಎನ್ನುವ ನಿಟ್ಟಿನಲ್ಲಿ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಆಹಾರ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತು ಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಉಚಿತವಾಗಿ ಕ್ಯಾಂಟೀನ್ನಲ್ಲಿ ಲಭಿಸಲಿದೆ.
ಈ ಕುರಿತು ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, ಕೂಲಿ ಕಾರ್ಮಿಕರಿಗೆ,ವಲಸಿಗರಿಗೆ, ದುರ್ಬಲ ವರ್ಗದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದೆ. ಯಾರೂ ಹಸಿವಿನಿಂದ ಬಳಲ ಬಾರದೆಂದು ಈ ಯೋಜನೆಯನ್ನು ಮುಖ್ಯಮಂತ್ರಿಗಳ ಅನುಮತಿ ಪಡೆದು ಜಾರಿ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಗಂಡನಿಗೆ ಪತ್ನಿಯ ಮೇಲೆ ದೈಹಿಕ ಕಾಮನೆಗಳೇ ಬರದುದಕ್ಕೆ ಕಾರಣಗಳು ಇವೆಲ್ಲಾ ಇರುತ್ತವಮ್ಮಾ…
ಆಕ್ಸಿಜನ್ ಮುಗೀತಿದೆ, ಯಾರೂ ಬರ್ತಿಲ್ಲ… ಮೃತ ನಟ ರಾಹುಲ್ನ ಹೃದಯವಿದ್ರಾವಕ ವಿಡಿಯೋ ಹಂಚಿಕೊಂಡ ಪತ್ನಿ