ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯ ಗಂಗಾವತಿ ನಗರ ಸಭೆ ಕಾಂಗ್ರೆಸ್ ಸದಸ್ಯನನ್ನು ಅಪಹರಣ ಮಾಡಲಾಗಿರುವ ಘಟನೆ ನಡೆದಿದೆ.
ಕಾಂಗ್ರೆಸ್ ಸದಸ್ಯ ಮನೋಹರ ಸ್ವಾಮಿ ಹಿರೇಮಠ ಅವರು ಅಪಹರಣಕ್ಕೆ ಒಳಗಾದವರು. ಗಂಗಾವತಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಹೋಗಿದ್ದ ಮನೋಹರ ಅವರನ್ನು ಅಲ್ಲಿಂದಲೇ ಅಪಹರಣ ಮಾಡಲಾಗಿದೆ. ಅವರನ್ನು ಕೆಲವರು ಕತ್ತು ಹಿಡಿದು ಎಳೆದುಕೊಂಡು ಹೋಗಿದ್ದಾರೆ.
ಕೆಲವರು ಬಂದು ಬಾರ್ನಲ್ಲಿ ಕುಳಿತಿದ್ದ ಹಿರೇಮಠ ಅವರನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ರೋಡ್ ಶೋ ಕೆಲವೇ ಕ್ಷಣಗಳಲ್ಲಿ ಆರಂಭ
ಗಂಗಾವತಿಯಲ್ಲಿ ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ನವೆಂಬರ್ 2ರಂದು ಚುನಾವಣೆ ಇದೆ. ಆದ್ದರಿಂದ ಅವರನ್ನು ಬಿಜೆಪಿ ಕಾರ್ಯಕರ್ತರು ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ನಗರ ಸಭೆ ಸದಸ್ಯರು ಈ ಕೃತ್ಯ ಎಸಗಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ನಗರಸಭೆ ಸದಸ್ಯರಾದ ಪರಶುರಾಮ ಮಡ್ಡೇರ್, ಅಜಯ್ ಬಿಚ್ಚಾಲಿ, ನವೀನ ಪಾಟೀಲ್ ಮಾಜಿ ಸದಸ್ಯ ರಾಚ್ಚಪ್ಪ ಸಿದ್ದಾಪುರ, ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಸೇರಿದಂತೆ ಸಹಚರರಾದ ರವಿ ಲಿಂಗರಾಜ ಕ್ಯಾಂಪ್, ಡಬರಿ ಶರಣ ಅವರ ವಿರುದ್ಧ ದೂರು ದಾಖಲಾಗಿದೆ.
ಈ ಎಂಟು ಜನರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪುಲ್ವಾಮಾ ದಾಳಿ ಮಾಡಿಸಿದ್ದು ನಾವಲ್ಲ… ಭಾರತದ ದಾಳಿಗೆ ನಾವೇನೂ ಹೆದರಿಲ್ಲ- ಉಲ್ಟಾ ಹೊಡೆದ ಪಾಕ್